Select Your Language

Notifications

webdunia
webdunia
webdunia
webdunia

ಮಾಜಿ ಸಿಎಂ ಸಿದ್ದರಾಮಯ್ಯಗೆ ಶಾಕ್ ನೀಡಲು ಕಾಂಗ್ರೆಸ್ ನಲ್ಲೇ ಸಿದ್ಧತೆ!

ಮಾಜಿ ಸಿಎಂ ಸಿದ್ದರಾಮಯ್ಯಗೆ ಶಾಕ್ ನೀಡಲು ಕಾಂಗ್ರೆಸ್ ನಲ್ಲೇ ಸಿದ್ಧತೆ!
ಬೆಂಗಳೂರು , ಶುಕ್ರವಾರ, 20 ಜುಲೈ 2018 (10:16 IST)
ಬೆಂಗಳೂರು: ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯಗೆ ಶಾಕ್ ನೀಡಲು ಕಾಂಗ್ರೆಸ್ ನಲ್ಲೇ ಸಿದ್ಧತೆ ನಡೆದಿದೆ ಎನ್ನಲಾಗಿದೆ.
 

ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ ಸರ್ಕಾರವನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಕೆಲವು ನಾಯಕರು ದೂರಿದ್ದಾರೆ. ಇದೇ ಕಾರಣಕ್ಕೆ ಅವರಿಗೆ ನೀಡಲುದ್ದೇಶಿಸಿದ್ದ ಸಂಪುಟ ದರ್ಜೆ ಸ್ಥಾನಮಾನ ನೀಡಲು ಕಾಂಗ್ರೆಸ್ ನಾಯಕರಲ್ಲಿ ಅಪಸ್ವರ ಕೇಳಿಬಂದಿದೆ.

ಸಿಡಬ್ಲ್ಯುಸಿ ಸದಸ್ಯರಾಗಿಯೂ ನೇಮಕವಾಗಿರುವುದರಿಂದ ಸಿದ್ದರಾಮಯ್ಯ ಹಿಡಿತ ಪಕ್ಷದಲ್ಲಿ ಹೆಚ್ಚಾಗುತ್ತದೆ ಎಂಬ ಕಾರಣಕ್ಕೆ ಅವರಿಗೆ ಕ್ಯಾಬಿನೆಟ್ ದರ್ಜೆ ನೀಡಲು ಅಪಸ್ವರ ಕೇಳಿಬಂದಿದೆ. ಈ ನಡುವೆ ಸಂಪುಟ ದರ್ಜೆಯಿಲ್ಲದ ಸಿದ್ದರಾಮಯ್ಯಗೆ ವಿಧಾನಸೌಧದಲ್ಲಿ ಪ್ರತ್ಯೇಕ ಕಚೇರಿ ನೀಡಿರುವುದಕ್ಕೆ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ. ಸದ್ಯಕ್ಕೆ ಸರ್ಕಾರಿ ಬಂಗಲೆ ಕಾವೇರಿಯಲ್ಲಿರುವ ಸಿದ್ದರಾಮಯ್ಯ ಸಂಪುಟ ದರ್ಜೆ ಇಲ್ಲದೇ ಇರುವ ಕಾರಣಕ್ಕೆ ಖಾಸಗಿ ಮನೆಗೆ ವಾಸ್ತವ್ಯ ಬದಲಿಸಲು ಚಿಂತನೆ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಕುಮಾರಸ್ವಾಮಿ ಒಂದು ದಿನದ ಕೊಡಗು ಭೇಟಿಗೆ 100 ಮರಗಳು ಉರುಳಿತು!