Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯನವರ ಬಂಗಲೆ ಇದೀಗ ಕೆಜೆ ಜಾರ್ಜ್ ಗೆ

ಸಿದ್ದರಾಮಯ್ಯನವರ ಬಂಗಲೆ ಇದೀಗ ಕೆಜೆ ಜಾರ್ಜ್ ಗೆ
ಬೆಂಗಳೂರು , ಶುಕ್ರವಾರ, 13 ಜುಲೈ 2018 (11:26 IST)
ಬೆಂಗಳೂರು: ಸಿಎಂ ಆಗಿದ್ದಾಗ ತಮಗೆ ನೀಡಲಾಗಿದ್ದ ಸರ್ಕಾರಿ ಬಂಗಲೆ ‘ಕಾವೇರಿ’ಯನ್ನು ಇದೀಗ ಸಿದ್ದರಾಮಯ್ಯ ತಮ್ಮ ಪರಮಾಪ್ತ ಸಚಿವ ಕೆಜೆ ಜಾರ್ಜ್ ಗೆ ನೀಡಬೇಕಾಗಿದೆ.

ಸಿದ್ದರಾಮಯ್ಯ ಬಳಸುತಿದ್ದ ಕಾವೇರಿ ನಿವಾಸವನ್ನು ಕುಮಾರಸ್ವಾಮಿ ಸಂಪುಟದಲ್ಲಿ ಕೈಗಾರಿಕಾ ಸಚಿವ ಕೆಜೆ ಜಾರ್ಜ್ ಗೆ ನೀಡಲಾಗಿದೆ. ಆದರೆ ಸಿದ್ದರಾಮಯ್ಯ ಇನ್ನೂ ಕಾವೇರಿ ನಿವಾಸದಲ್ಲಿಯೇ ಇದ್ದಾರೆ.

ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡುವುದರ ಮೂಲಕ ಸರ್ಕಾರಿ ಬಂಗಲೆ ನೀಡಲು ಅನುಕೂಲ ಮಾಡಿಕೊಡಲಾಗುವುದು ಎಂಬ ಮಾತುಗಳು ಕೇಳಿಬರುತ್ತಿತ್ತು. ಆದರೆ  ಅದು ಸುಳ್ಳಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

Share this Story:

Follow Webdunia kannada

ಮುಂದಿನ ಸುದ್ದಿ

ಸ್ವಕ್ಷೇತ್ರ ಬಾದಾಮಿಯಲ್ಲಿ ಸಿದ್ದರಾಮಯ್ಯ ಟೂರ್