Select Your Language

Notifications

webdunia
webdunia
webdunia
webdunia

ವಿಧಾನಸಭೆ ಕಲಾಪ ಒಂದು ದಿನ ವಿಸ್ತರಣೆ

ವಿಧಾನಸಭೆ ಕಲಾಪ ಒಂದು ದಿನ ವಿಸ್ತರಣೆ
ಬೆಂಗಳೂರು , ಗುರುವಾರ, 12 ಜುಲೈ 2018 (11:54 IST)
ಬೆಂಗಳೂರು: ಬಜೆಟ್ ಮೇಲೆ ಚರ್ಚೆ ಮಾಡಲು ರಾಜ್ಯ ವಿಧಾನಸಭೆ ಕಲಾಪ ಇನ್ನೂ ಒಂದು ದಿನ ವಿಸ್ತರಣೆಯಾಗಲಿದೆ. ವಿಧಾನಸಭೆ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ವಿಧಾನಸೌಧದಲ್ಲಿ ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ, ಸಚಿವ ಎಚ್ ಡಿ ರೇವಣ್ಣ, ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಬಿಎಸ್ ಯಡಿಯೂರಪ್ಪ ಬಜೆಟ್ ಒಂದು ದಿನದ ಮಟ್ಟಿಗೆ ವಿಸ್ತರಣೆ ಮಾಡಲು ಮನವಿ ಮಾಡಿದ್ದರು.

ಅದರಂತೆ ಒಂದು ದಿನ ವಿಸ್ತರಣೆ ಮಾಡಲಾಗಿದ್ದು, ಮಧ್ಯಾಹ್ನ 2 ಗಂಟೆಯವರೆಗೂ ಬಜೆಟ್ ಮೇಲೆ ಚರ್ಚೆ ನಡೆಯಲಿದೆ. 3 ಗಂಟೆ ಬಳಿಕ ಸಿಎಂ ಕುಮಾರಸ್ವಾಮಿ ಪ್ರಶ್ನೆಗಳಿಗೆ ಉತ್ತರ ಕೊಡಲಿದ್ದಾರೆ. ಈ ಸಂದರ್ಭದಲ್ಲಿ ಸಾಕಷ್ಟು ಗದ್ದಲಗಳಾಗುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

Share this Story:

Follow Webdunia kannada

ಮುಂದಿನ ಸುದ್ದಿ

2019 ರ ಲೋಕಸಭೆ ಚುನಾವಣೆ ಬಿಜೆಪಿ ಗೆದ್ದರೆ ಭಾರತ ಹಿಂದೂ ಪಾಕಿಸ್ತಾನವಾಗುತ್ತೆ ಎಂದವರು ಯಾರು ಗೊತ್ತೇ?