Select Your Language

Notifications

webdunia
webdunia
webdunia
webdunia

ಸುಳ್ವಾಡಿ ವಿಷ ಪ್ರಸಾದ ಪ್ರಕರಣ: ಆರೋಪಿಗಳ ನ್ಯಾಯಾಂಗ ಅವಧಿ ವಿಸ್ತರಣೆ

ಸುಳ್ವಾಡಿ ವಿಷ ಪ್ರಸಾದ ಪ್ರಕರಣ: ಆರೋಪಿಗಳ ನ್ಯಾಯಾಂಗ ಅವಧಿ ವಿಸ್ತರಣೆ
ಚಾಮರಾಜನಗರ , ಮಂಗಳವಾರ, 29 ಜನವರಿ 2019 (16:32 IST)
ಚಾಮರಾಜನಗರ ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 12ರವರೆಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯನ್ನು ಆರೋಪಿಗಳಿಗೆ ಮಾಡಲಾಗಿದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ನಾಲ್ವರು ಆರೋಪಿಗಳ ವಿಚಾರಣೆ ನಡೆಯಿತು. ಮೈಸೂರಿನ ಜೈಲಿನಿಂದಲೇ ವಿಚಾರಣೆ ಎದುರಿಸಿದ ಸುಳ್ವಾಡಿ ದುರಂತದ ನಾಲ್ವರು ಆರೋಪಿಗಳು, ಎರಡನೇ ಬಾರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ಎದುರಿಸಿದರು.

ನಾಲ್ವರಲ್ಲಿ ಮೊದಲನೇ ಆರೋಪಿ ಇಮ್ಮಡಿ ಮಹದೇವಸ್ವಾಮಿಯ ಪರ ಮಾತ್ರ ಜಾಮೀನು ಅರ್ಜಿ ಸಲ್ಲಿಕೆಯಾಗಿತ್ತು. ಉಳಿದ ಮೂವರಿಗೆ ವಕಾಲತ್ತು ಅರ್ಜಿ ಸಲ್ಲಿಸಲು ಆರೋಪಿಗಳಿಗೆ ಸೂಚನೆ ನೀಡಲಾಗಿದೆ. ಭದ್ರತಾ ಕಾರಣಗಳಿಗಾಗಿ ನ್ಯಾಯಾಲಯಕ್ಕೆ ಆರೋಪಿಗಳು ಹಾಜರಾಗಲಿಲ್ಲ. ಚಾಮರಾಜನಗರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜು ಅವರಿಂದ ಪ್ರಕರಣದ ವಿಚಾರಣೆ ನಡೆಯಿತು.

 

Share this Story:

Follow Webdunia kannada

ಮುಂದಿನ ಸುದ್ದಿ

ವಾಟ್ಸಪ್‌ ಅಪ್ಡೇಟ್: ಒಂದು ಫೋನ್‌ನಲ್ಲಿ ಎರಡು ವಾಟ್ಸಪ್‌ ಅನ್ನು ಹೇಗೆ ಬಳಸುವುದು - ನೀವು ಎರಡು ಖಾತೆಗಳನ್ನು ಹೊಂದಬಹುದೇ?