Select Your Language

Notifications

webdunia
webdunia
webdunia
webdunia

ಇಂದು ಬೆಂಬಲಿಗರ ಜೊತೆ ಸುಮಲತಾ ಸಭೆ

Sumalatha

Krishnaveni K

ಮಂಡ್ಯ , ಶನಿವಾರ, 30 ಮಾರ್ಚ್ 2024 (09:01 IST)
ಮಂಡ್ಯ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಬಿಜೆಪಿ ಟಿಕೆಟ್ ಸಿಗದೇ ಇರುವುದು ಹಾಲಿ ಸಂಸದೆ ಸುಮಲತಾ ಅಸಮಾಧಾನಕ್ಕೆ ಕಾರಣವಾಗಿದೆ.

ಸ್ಪರ್ಧಿಸಿದರೆ ಮಂಡ್ಯದಿಂದಲೇ ಎಂದು ಪಟ್ಟು ಹಿಡಿದು ಕುಳಿತಿದ್ದ ಸುಮಲತಾಗೆ ಬಿಜೆಪಿ ಹೈಕಮಾಂಡ್ ನಿರಾಸೆ ಮಾಡಿದೆ. ಮಂಡ್ಯ ಕ್ಷೇತ್ರವನ್ನು ಮೈತ್ರಿ ಪಕ್ಷ ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದು ಸುಮಲತಾ ಅಸಮಾಧಾನ ಹೆಚ್ಚಿಸಿದೆ. ಸಾಕಷ್ಟು ಬಾರಿ ದೆಹಲಿಗೆ ಹೋಗಿ ಹೈಕಮಾಂಡ್ ಗೆ ವಿನಂತಿ ಮಾಡಿದರೂ ಪ್ರಯೋಜನವಾಗಿಲ್ಲ.

ಹೀಗಾಗಿ ಸುಮಲತಾ ಈಗ ತಮ್ಮ ನಿರ್ಧಾರ ಕೈಗೊಳ್ಳಲಿದ್ದಾರೆ. ಈಗಾಗಲೇ ತಮ್ಮ ಬೆಂಬಲಿಗರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಅವರೆಲ್ಲರೂ ಪಕ್ಷೇತರರಾಗಿ ಸ್ಪರ್ಧಿಸಿ ಎಂಬ ಒತ್ತಾಯ ಮಾಡಿದ್ದಾರೆ. ಹೀಗಾಗಿ ಸುಮಲತಾ ಮುಂದಿನ ನಡೆಯೇನು ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಈಗಲೂ ಸುಮಲತಾ ನಾನು ಸ್ಪರ್ಧಿಸಿದರೆ ಮಂಡ್ಯದಿಂದಲೇ. ನನಗೆ ಜೀವನ ಏನಿದ್ದರೂ ಮಂಡ್ಯದಿಂದಲೇ ಎಂದು ಪುನರುಚ್ಚರಿಸಿದ್ದಾರೆ. ಹೀಗಾಗಿ ಇಂದು ಮತ್ತೊಮ್ಮೆ ಮಂಡ್ಯದಲ್ಲಿ ಬೆಂಬಲಿಗರ ಜೊತೆ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತಂದೆಯ ಅಂತ್ಯ ಕ್ರಿಯೆ: ಅವಕಾಶ ಕೋರಿದ ಜೈಲಿನಲ್ಲಿರುವ ಮಗ ಅಬ್ಬಾಸ್ ಅನ್ಸಾರಿ