Select Your Language

Notifications

webdunia
webdunia
webdunia
webdunia

ಕಾಳಿಕಾಂಬ ದೇವಸ್ಥಾನದಲ್ಲಿ ಸುಮಲತಾ ಪೂಜೆ: ಕೆಲವೇ ಕ್ಷಣಗಳಲ್ಲಿ ಘೋಷಣೆ

Sumalatha

Krishnaveni K

ಮಂಡ್ಯ , ಬುಧವಾರ, 3 ಏಪ್ರಿಲ್ 2024 (11:41 IST)
ಮಂಡ್ಯ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬೇಕೋ ಬೇಡವೋ ಎಂಬ ಬಗ್ಗೆ ಸುಮಲತಾ ಅಂಬರೀಶ್ ಇಂದು ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಇದೇ ಹಿನ್ನಲೆಯಲ್ಲಿ ಇದೀಗ ಕಾಳಿಕಾಂಬ ದೇವಸ್ಥಾನಕ್ಕೆ ಬಂದಿದ್ದಾರೆ.

ಕಾಳಿಕಾಂಬ ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿದ ಬಳಿಕ ಜನರ ಮುಂದೆಯೇ ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ತೀರ್ಮಾನ ಮಾಡುವುದಾಗಿ ಸುಮಲತಾ ಹೇಳಿದ್ದಾರೆ. ಅದರಂತೆ ದೇವಾಲಯಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೀಗ ಕೆಲವೇ ಕ್ಷಣದಲ್ಲಿ ಘೋಷಣೆ ಮಾಡಲಿದ್ದಾರೆ.

ಸುಮಲತಾಗೆ ನಟ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಪುತ್ರ ಅಭಿಷೇಕ್ ಅಂಬರೀಶ್ ಸಾಥ್ ನೀಡಿದ್ದಾರೆ. ಜೊತೆಗೆ ಸುಮಲತಾ ಬೆಂಬಲಿಗರೂ ಅಪಾರ ಸಂಖ್ಯೆಯಲ್ಲಿ ದೇವಾಲಯದಲ್ಲಿ ಸೇರಿದ್ದಾರೆ. ದರ್ಶನ್ ಕೂಡಾ ನನ್ನ ಜೊತೆಗಿರಲಿದ್ದಾರೆ ಎಂದು ಸುಮಲತಾ ಮೊನ್ನೆಯೇ ಹೇಳಿದ್ದರು.

ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಕೊನೆಯ ದಿನವಾಗಿದೆ. ಹೀಗಾಗಿ ಅವರು ಇಂದು ಅಂತಿಮ ನಿರ್ಧಾರ ಪ್ರಕಟಿಸಲಿದ್ದಾರೆ. ಅವರ ನಿರ್ಧಾರಕ್ಕಾಗಿ ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದೆಹಲಿ ಸಿಎಂ ಕೇಜ್ರಿವಾಲ್ ಗೆ ಜೈಲಿನಲ್ಲಿ ಅನಾರೋಗ್ಯ