Select Your Language

Notifications

webdunia
webdunia
webdunia
webdunia

ಕೇಂದ್ರ ನೌಕರರಿಗೆ ಸಿಹಿ ಸುದ್ದಿ

ಕೇಂದ್ರ ನೌಕರರಿಗೆ ಸಿಹಿ ಸುದ್ದಿ
ನವದೆಹಲಿ , ಗುರುವಾರ, 30 ಆಗಸ್ಟ್ 2018 (17:24 IST)
ಕೇಂದ್ರ ಸರಕಾರಿ ನೌಕರರಿಗೆ ಪ್ರಧಾನಿ ನರೇಂದ್ರ ಮೋದಿ ಶೀಘ್ರವೇ ಮತ್ತೊಂದು ಸಿಹಿ ಸುದ್ದಿ ನೀಡಲಿದ್ದಾರೆ.
ಕೇಂದ್ರ ಸರಕಾರಿ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ ಸಿಗಲಿದೆ. ಮುಂಬರುವ ಗೌರಿ ಗಣೇಶ ಹಬ್ಬದ ಅಂಗವಾಗಿ ಕೇಂದ್ರ ಸರಕಾರಿ ನೌಕರರಿಗೆ ಹೆಚ್ಚುವರಿ ಡಿಎ ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಗೌರಿ ಗಣೇಶ ಹಬ್ಬದ ಉಡುಗೊರೆಯಾಗಿ ನೌಕರರ ಸಂಬಳದ ಶೇ. 2 ರಷ್ಟು ಹೆಚ್ಚುವರಿಯಾಗಿ ಡಿ.ಎ ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದರಿಂದ 48 ಲಕ್ಷ ನೌಕರರು ಮತ್ತು 60 ಲಕ್ಷ ನಿವೃತ್ತ ನೌಕರರಿಗೆ ಲಾಭ ಆಗಲಿದೆ.

ಹಬ್ಬದ ಮೊದಲೇ ಡಿಎ ಹೆಚ್ಚುವರಿ ಆಗಿರುವುದು ನೌಕರರಲ್ಲಿ ಸಹಜವಾಗಿ ಸಂತಸಕ್ಕೆ ಕಾರಣವಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಚೀನಾದಲ್ಲಿ ನಡೆದ ಈ ತ್ರಿಕೋನ ಪ್ರೀತಿಯ ಕತೆ ಕೇಳಿದರೆ ಶಾಕ್ ಆಗ್ತೀರಾ