Select Your Language

Notifications

webdunia
webdunia
webdunia
webdunia

ಶಿಕ್ಷಕರ ದಿನಾಚರಣೆ ಮಾರನೇ ದಿನ: ಶಾಲೆಯಲ್ಲೇ ನೇಣಿಗೆ ಶರಣಾದ ಶಿಕ್ಷಕ

ಶಿಕ್ಷಕರ ದಿನಾಚರಣೆ ಮಾರನೇ ದಿನ: ಶಾಲೆಯಲ್ಲೇ ನೇಣಿಗೆ ಶರಣಾದ ಶಿಕ್ಷಕ
ಹುಬ್ಬಳ್ಳಿ , ಗುರುವಾರ, 6 ಸೆಪ್ಟಂಬರ್ 2018 (15:57 IST)
ಶಿಕ್ಷಕ ದಿನಾಚರಣೆಯ ಮಾರನೇ ದಿನವೇ ಶಿಕ್ಷಕನೊಬ್ಬ ಶಾಲೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

ಹುಬ್ಬಳ್ಳಿ ತಾಲೂಕಿನ ಕೊಳಿವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ.
ಚನ್ನಪ್ಪ ತೊಟಗಂಟಿ (42) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ. ಕೊಪ್ಪಳ ಮೂಲದ ಈ ಶಿಕ್ಷಕ ಕಳೆದು ಹತ್ತು ವರ್ಷಗಳಿಂದ ಇದೇ ಶಾಲೆಯಲ್ಲಿ ದೈಹಿಕ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದ. ಬೆಳಗ್ಗೆ ಶಾಲೆಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಾಲೆಯಲ್ಲಿ ಮಕ್ಕಳು ಕಡಿಮೆ ಇದ್ದಾರೆ ಎಂಬ ಕಾರಣಕ್ಕೆ ಈ ಶಿಕ್ಷಕನನ್ನು ಬೇರೆ ಕಡೆ ವರ್ಗಾವಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಮಾಡಿತ್ತು. 

ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Share this Story:

Follow Webdunia kannada

ಮುಂದಿನ ಸುದ್ದಿ

ಸೆಪ್ಟೆಂಬರ್ 9 ರಂದು 9 ನೇ ಬಸವ ಪಂಚಮಿ ಸಂಭ್ರಮ