Select Your Language

Notifications

webdunia
webdunia
webdunia
webdunia

ವಿಶ್ವಾಸಮತ ಯಾಚನೆಗೆ ಮುನ್ನವೇ ಬಿಜೆಪಿ ಬಂದ್‌ಗೆ ಕರೆ ನೀಡಿರುವುದು ಶೋಭೆ ತರುವ ವಿಚಾರವಲ್ಲ - ಶಾಸಕ ಯು.ಟಿ. ಖಾದರ್

ವಿಶ್ವಾಸಮತ ಯಾಚನೆಗೆ ಮುನ್ನವೇ ಬಿಜೆಪಿ ಬಂದ್‌ಗೆ ಕರೆ ನೀಡಿರುವುದು ಶೋಭೆ ತರುವ ವಿಚಾರವಲ್ಲ - ಶಾಸಕ ಯು.ಟಿ. ಖಾದರ್
ಮಂಗಳೂರು , ಶನಿವಾರ, 26 ಮೇ 2018 (14:02 IST)
ಮಂಗಳೂರು : ನೂತನ ಸರ್ಕಾರ ರೈತರ ಸಾಲಮನ್ನಾ ಮಾಡದಿದ್ದರೆ ಕರ್ನಾಟಕ ಬಂದ್ ಮಾಡುವುದಾಗಿ ಬಿಜೆಪಿ ಹೇಳಿರುವ ಹಿನ್ನಲೆಯಲ್ಲಿ  ಮಾಜಿ ಸಚಿವ ಹಾಗೂ ಶಾಸಕ ಯು.ಟಿ. ಖಾದರ್ ಅವರು,’ ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರುತ್ತಿರುವ ಬಗ್ಗೆ ಬಿಜೆಪಿ ಮಾತನಾಡುವುದಿಲ್ಲ. ಬದಲಾಗಿ ರಾಜಕೀಯ ಪ್ರೇರಿತವಾಗಿ ವರ್ತಿಸುತ್ತಿದೆ ಎಂದು ಆರೋಪಿಸಿದ್ದಾರೆ.


ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,’ ಸಚಿವ ಸಂಪುಟದ ಸಭೆಯೇ ನಡೆದಿಲ್ಲ. ಸಚಿವರ ಆಯ್ಕೆಯೇ ಆಗಿಲ್ಲ. ಇಂತಹ ಸಮಯದಲ್ಲಿ ವಿಶ್ವಾಸಮತ ಯಾಚನೆಗೆ ಮುನ್ನವೇ ಬಿಜೆಪಿ ಬಂದ್‌ಗೆ ಕರೆ ನೀಡಿರುವುದು ಶೋಭೆ ತರುವ ವಿಚಾರವಲ್ಲ ಎಂದು ಬಿಜೆಪಿ ನಾಯಕರ ವರ್ತನೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.


ಹಾಗೇ ‘ತನಗೆ ಸಚಿವ ಸ್ಥಾನ ದೊರೆಯಲಿದೆಯೇ ಎಂಬ ವಿಚಾರವೂ ಹೈಕಮಾಂಡ್ ಸೇರಿದ ವಿಷಯ. ಜಿಲ್ಲೆಯಲ್ಲಿ ಸಚಿವ ಸ್ಥಾನದ ಕುರಿತಂತೆ ಯಾರ ಜತೆಯೂ ಪೈಪೋಟಿ ಇಲ್ಲ. ನಾವಿಬ್ಬರೂ ಬೇರೆ ಪಕ್ಷದವರಾಗಿದ್ದರೂ ಮಿತ್ರರಾಗಿದ್ದೇವೆ ಎಂದು ಬಿ.ಎಂ. ಫಾರೂಕ್ ಕುರಿತಾದ ಪ್ರಶ್ನೆಗೆ ಖಾದರ್ ಪ್ರತಿಕ್ರಿಯಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಿಯಕರನ ಎದುರೇ ಯುವತಿಯ ಮೇಲೆ ಸಾಮಾಹಿಕ ಅತ್ಯಾಚಾರ ಎಸಗಿದ ಕಾಮುಕರು