Select Your Language

Notifications

webdunia
webdunia
webdunia
webdunia

ಸಮ್ಮಿಶ್ರ ಸರ್ಕಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯ ಮೇಲೆ ನಿಂತಿದೆ-ಕೆ.ವೈ.ನಂಜೇಗೌಡ

ಸಮ್ಮಿಶ್ರ ಸರ್ಕಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯ ಮೇಲೆ ನಿಂತಿದೆ-ಕೆ.ವೈ.ನಂಜೇಗೌಡ
ಕೋಲಾರ , ಭಾನುವಾರ, 23 ಸೆಪ್ಟಂಬರ್ 2018 (06:50 IST)
ಕೋಲಾರ : ರಾಜ್ಯ ಸಮ್ಮಿಶ್ರ ಸರ್ಕಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯ ಮೇಲೆ ನಿಂತಿದೆ ಎಂದು ಕಾಂಗ್ರೆಸ್ ಶಾಸಕ ಕೆ ವೈ ನಂಜೇಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.


ಮಾಲೂರಿನಲ್ಲಿ ಕುರುಬ ಸಮುದಾಯದ ಪ್ರತಿಭಾ ಪುರಸ್ಕಾರ ಹಾಗು ಅಭಿನಂದನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಸಿದ್ದರಾಮಯ್ಯ ಓಕೆ ಅಂದ್ರೆ ಸರ್ಕಾರ 5 ವರ್ಷ‌ ಇರುತ್ತೆ, ಅವ್ರೇನಾದ್ರು ಓಯ್ ಅಂದ್ರೆ ನಾವೆಲ್ಲ ವಾಪಸ್ ಆಗ್ತೇವೆ ಎಂದು ಹೇಳಿದ್ದಾರೆ.


‘ಯಾವ ಶಾಸಕರೂ ಮಾರಾಟಕ್ಕಿಲ್ಲ. ಈಗಲೂ ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಇಲ್ಲವೆಂದಲ್ಲ. ಆದರೆ ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಅಧಿಕಾರದಲ್ಲಿದೆ. ಒಂದು ವೇಳೆ ಸಿದ್ದರಾಮಯ್ಯ ಏಯ್​ ಅಂದರೆ ಸರ್ಕಾರವೇ ಇರಲ್ಲ’ ಎಂದು ಹೇಳಿದ್ದಾರೆ. ಈ ಸಭೆಯಲ್ಲಿ ಹಾಜರಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಶಾಸಕ ಕೆವೈ ನಂಜೇಗೌಡ ಮಾತಗಳನ್ನು ಕೇಳಿ ಕ್ಷಣ ಕಾಲ ದಂಗಾಗಿಹೋಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಕಿರಾತಕರು