Select Your Language

Notifications

webdunia
webdunia
webdunia
webdunia

ಸುಮಲತಾಗೆ ಬೆಂಬಲಿಸಿದ ಕೆಪಿಸಿಸಿ ಸದಸ್ಯನನ್ನು ಉಚ್ಛಾಟನೆ ಮಾಡಿದ ಕಾಂಗ್ರೆಸ್

ಸುಮಲತಾಗೆ ಬೆಂಬಲಿಸಿದ ಕೆಪಿಸಿಸಿ ಸದಸ್ಯನನ್ನು ಉಚ್ಛಾಟನೆ ಮಾಡಿದ ಕಾಂಗ್ರೆಸ್
ಮಂಡ್ಯ , ಶನಿವಾರ, 23 ಮಾರ್ಚ್ 2019 (07:08 IST)
ಮಂಡ್ಯ : ಮಂಡ್ಯ ಲೊಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆ ಬೆಂಬಲ ನೀಡಿದ್ದ  ಸಚಿವ ಎಂ. ಬಿ. ಪಾಟೀಲ್ ಆಪ್ತ ಎಂದೇ ಗುರುತಿಸಿಕೊಂಡಿದ್ದ ಕೈ ಮುಖಂಡ ಸಚ್ಚಿದಾನಂದರನ್ನು ಕೆಪಿಸಿಸಿ ಸದಸ್ಯ ಸ್ಥಾನದಿಂದ ಉಚ್ಛಾಟನೆ ಮಾಡಲಾಗಿದೆ.


ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದು, ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಿಖೀಲ್ ಕುಮಾರ್ ಸ್ವಾಮಿಗೆ ಬೆಂಬಲಿಸುವಂತೆ ಸೂಚಿಸಿದ್ದರು.  ಆದರೆ ಕಾಂಗ್ರೆಸ್ ಮುಖಂಡ ಸಚ್ಚಿದಾನಂದ ಬಹಿರಂಗವಾಗಿಯೇ ಸುಮಲತಾ ಅಂಬರೀಶ್ ಗೆ ಬೆಂಬಲ ನೀಡುತ್ತಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಸದಸ್ಯ ಸ್ಥಾನದಿಂದ ಅವರನ್ನು ಉಚ್ಚಾಟನೆ ಮಾಡಲಾಗಿದೆ.


ಈ ಬಗ್ಗೆ ಪ್ರತಿಕ್ರಿಯಿಸಿದ ಸಚ್ಚಿದಾನಂದ 'ನನ್ನನ್ನು ಉಚ್ಚಾಟನೆ ಮಾಡಿದ್ರೆ ಪರಿಹಾರ ಸಿಗೋಲ್ಲ, ಜಿಲ್ಲೆಯ ವಿಚಾರದಲ್ಲಿ ನನಗೆ ಸ್ವಾಭಿಮಾನ ಮುಖ್ಯ, ನಾನೊಬ್ಬನೇ ಅಲ್ಲಾ, ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರು ಸುಮಲತಾ ಪರ ಇದ್ದಾರೆ ಹಾಗಾದರೆ ಅವರೆನ್ನೆಲ್ಲಾ ಉಚ್ಚಾಟನೆ ಮಾಡಲಿ ನೋಡೋಣ, ಅದೇನೆ ಇರಲಿ ಸುಮಲತಾ ಅವರನ್ನು ಗೆಲ್ಲಿಸುವುದೇ ನಮ್ಮ ಗುರಿ' ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.



 

Share this Story:

Follow Webdunia kannada

ಮುಂದಿನ ಸುದ್ದಿ

ನನ್ನ ಬಾಯ್ ಫ್ರೆಂಡ್ ನನ್ನ ತಪ್ಪನ್ನು ಕ್ಷಮಿಸಲು ತನ್ನ ಗೆಳೆಯರ ಜೊತೆ ಮಲಗಲು ಹೇಳುತ್ತಿದ್ದಾನೆ