Select Your Language

Notifications

webdunia
webdunia
webdunia
webdunia

ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪದಲ್ಲಿ ತಪ್ಪಿದ ಅನಾಹುತ

ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪದಲ್ಲಿ ತಪ್ಪಿದ ಅನಾಹುತ
ಬೆಂಗಳೂರು , ಭಾನುವಾರ, 4 ಫೆಬ್ರವರಿ 2018 (11:14 IST)

ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಕಾರ್ಯಕ್ರಮಕ್ಕೆ ಅಡುಗೆ ಸಿದ್ಧಪಡಿಸುವಾಗ ಗ್ಯಾಸ್ ಲೀಕ್ ಆಗಿದ್ದು, ರೆಗ್ಯುಲೇಟರ್ ಬದಲಿಸಿದ್ದರಿಂದ ಅನಾಹುತ ತಪ್ಪಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸುವ ಈ ಕಾರ್ಯಕ್ರಮದ ಸಿದ್ಧತೆ ಜೋರಾಗಿ ನಡೆದಿದ್ದು, ಈ ನಡುವೆ ಸಣ್ಣ ಅನಾಹುತದಿಂದ ಕೆಲಕಾಲ ಆತಂಕ ನಿರ್ಮಾಣವಾಗಿದೆ.

ಅರಮನೆ ಮೈದಾನದಲ್ಲಿ ಅಡುಗೆ ಮಾಡುವಾಗ ಸಿಲಿಂಡರ್ ಲೀಕ್ ಆಗುವುದನ್ನು ಕಂಡು ಅಡುಗೆ ಮಾಡುವವರು ಆತಂಕಗೊಂಡು ಹೊರ ಬಂದಿದ್ದಾರೆ. ಇದೇ ವಿಷಯದಲ್ಲಿ ಅಡುಗೆ ಮಾಡುವವರು ಹಾಗೂ ಆಯೋಜಕರು ಮಾತಿನ ಚಕಮಕಿ ಕೂಡ ನಡೆಸಿದ್ದಾರೆ.

ಗ್ಯಾಸ್ ರೆಗ್ಯುಲೇಟರ್ ಬದಲಿಸಿದ  ನಂತರ ಪುನಃ ಅಡುಗೆ ಕೆಲಸ ಮುಂದುವರೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 


Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಸೇರಿದ ಮಾಜಿ ಸಚಿವ ಗೂಳಿಹಟ್ಟಿ ಶೇಖರ್