Select Your Language

Notifications

webdunia
webdunia
webdunia
webdunia

ಕೈ ಶಾಸಕರ ಜಗಳಕ್ಕೆ ಬಿಜೆಪಿ ಕಾರಣ ಎಂದ ಸಚಿವ

ಕೈ ಶಾಸಕರ ಜಗಳಕ್ಕೆ ಬಿಜೆಪಿ ಕಾರಣ ಎಂದ ಸಚಿವ
ಚಾಮರಾಜನಗರ , ಶನಿವಾರ, 26 ಜನವರಿ 2019 (15:35 IST)
ರೆಸಾರ್ಟ್​ನಲ್ಲಿ ಕಾಂಗ್ರೆಸ್ ಶಾಸಕರು ಬಡಿದಾಡಿಕೊಂಡಿರುವುದಕ್ಕೆ ಬಿಜೆಪಿ ಕಾರಣವೆಂದು ಸಚಿವರೊಬ್ಬರು ಹೇಳಿಕೆ ಕೊಟ್ಟಿದ್ದಾರೆ.

ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಗಂಭೀರ ಆರೋಪ ಮಾಡಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ಕೈಗೊಂಡಿದ್ದ ಬರ ಅಧ್ಯಯನದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರನ್ನು ಬಿಜೆಪಿಯವರು ಕರೆದೊಯ್ಯಲು ಪ್ರಯತ್ನ ಮಾಡಿದ್ದರಿಂದಲೇ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಂಡಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.

ಆಪರೇಶನ್ ಕಮಲ ಮಾಡಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಮತ್ತು ರಾಜ್ಯಾಧ್ಯಕ್ಷ ಯಡಿಯೂರಪ್ಪ ಮುಂದಾಗಿದ್ದಾರೆ. ಆಡಳಿತ ಪಕ್ಷದ ಎಲ್ಲಾ ಶಾಸಕರ ಜೊತೆಗೂ ಬಿಜೆಪಿ ಮಾತುಕತೆಗೆ ಯತ್ನಿಸಿದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವಾಗ ಪ್ರತಿಪಕ್ಷ ರಚನಾತ್ಮಕ ಕೆಲಸ ಮಾಡಿಲ್ಲವೆಂದು ಜಿಟಿಡಿ ವಾಗ್ದಾಳಿ ನಡೆಸಿದರು.

ಬಿಜೆಪಿ ತನ್ನ ಶಾಸಕರನ್ನು ದೆಹಲಿ, ಮುಂಬೈ, ಹರಿಯಾಣದಲ್ಲಿ ಇರಿಸಿಕೊಂಡಿತ್ತು. ಆದ್ರೆ ರಾಜ್ಯ ಸರ್ಕಾರ ಬರ ಪರಿಸ್ಥಿತಿ ನಿಭಾಯಿಸಲು ಬದ್ಧವಾಗಿದೆ ಎಂದು ಬಿಜೆಪಿ ಆರೋಪಗಳಿಗೆ ಸಚಿವರು ತಿರುಗೇಟು ನೀಡಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ಸಿಗರಿಂದ ಅಹೋರಾತ್ರಿ ಧರಣಿ