Select Your Language

Notifications

webdunia
webdunia
webdunia
webdunia

ಸಮ್ಮಿಶ್ರ ಸರ್ಕಾರ ಬೀಳಲ್ಲ ಎಂದ ಸಚಿವ

ಸಮ್ಮಿಶ್ರ ಸರ್ಕಾರ ಬೀಳಲ್ಲ ಎಂದ ಸಚಿವ
ನೆಲಮಂಗಲ , ಶುಕ್ರವಾರ, 7 ಸೆಪ್ಟಂಬರ್ 2018 (14:34 IST)
ಸಮ್ಮಿಶ್ರ ಸರ್ಕಾರ 5 ವರ್ಷ ಇರುತ್ತೆ. ಜಾರಕಿಹೊಳಿ ಬ್ರದರ್ಸ್ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಜಗಳ ಸರಿಹೋಗಿದೆ. ಹೀಗಂತ ಸಚಿವ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಆತಂಕವಿಲ್ಲ. ನಮ್ಮ ಸರ್ಕಾರ ಸಂಪೂರ್ಣ ಐದು ವರ್ಷಗಳನ್ನ ಪೂರೈಸುತ್ತದೆ ಎಂದು ನೆಲಮಂಗಲದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಹೇಶ್ ಹೇಳಿದರು. ನೆಲಮಂಗಲದಲ್ಲಿ ಆಯೋಜಿಸಿದ್ದ ಬಿಎಸ್ಪಿ ಸೇರ್ಪಡೆ ಹಾಗೂ ಅಭಿನಂದನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ನಮ್ಮ ಸರ್ಕಾರ ಸುಭದ್ರವಾಗಿದೆ. ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆಯ ಗುದ್ದಾಟವನ್ನ ನೋಡಿ ಅವರ ಸಮಸ್ಯೆಯನ್ನು ಹೈಕಮಾಂಡ್ ತಿಳಿಮಾಡಿದೆ.

ಬಿಜೆಪಿ ನಾಯಕರಿಗೆ ಯಾವುದೇ ಕೆಲಸವಿಲ್ಲ.  ಸುಖಾಸುಮ್ಮನೆ ಆರೋಪಗಳನ್ನು ಮಾಡ್ತಾರೆ. ಇನ್ನೂ ಉಪಸಭಾಧ್ಯಕ್ಷ ಕೃಷ್ಣಾರೆಡ್ಡಿ ರಾಜೀನಾಮೆ ವಿಚಾರ    ನನಗೆ ಗೊತ್ತಿಲ್ಲ ಅವರನ್ನೇ ಕೇಳಬೇಕು ಎಂದರು. ಸಿದ್ದರಾಮಯ್ಯ ವಿದೇಶ ಪ್ರವಾಸ ವಿಚಾರಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ಸರ್ಕಾರ ಬೀಳಿಸಲು ವಿದೇಶಕ್ಕೆ ಹೋಗಿಲ್ಲ, ಪ್ರವಾಸಕ್ಕೆ ಮಾತ್ರ ತೆರಳಿದ್ದಾರೆ ಅಷ್ಟೇ ಎಂದು ಸಚಿವ ಮಹೇಶ್ ಹೇಳಿದರು.




Share this Story:

Follow Webdunia kannada

ಮುಂದಿನ ಸುದ್ದಿ

ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಗೆ ಗ್ರಾಮಸ್ಥರಿಂದ ತರಾಟೆ