Select Your Language

Notifications

webdunia
webdunia
webdunia
webdunia

ಗೆಳತಿಯೊಂದಿಗೆ ಜನುಮದಿನ ಆಚರಿಸಿಕೊಳ್ಳುತ್ತಿದ್ದ ಯುವಕನ ಕೊಲೆ

ಗೆಳತಿಯೊಂದಿಗೆ ಜನುಮದಿನ ಆಚರಿಸಿಕೊಳ್ಳುತ್ತಿದ್ದ ಯುವಕನ ಕೊಲೆ
ಕಲಬುರಗಿ , ಭಾನುವಾರ, 23 ಸೆಪ್ಟಂಬರ್ 2018 (20:21 IST)
ಗೆಳತಿಯೊಂದಿಗೆ ಜನುಮದಿನ ಆಚರಣೆ ಮಾಡಿಕೊಳ್ಳುತ್ತಿದ್ದ ಯುವಕನನ್ನು ಕೊಲೆಮಾಡಿರುವ ಘಟನೆ ನಡೆದಿದೆ.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ. ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಗ್ರಾಮದ ನಿವಾಸಿ ಪ್ರಸಾದ ಮಾದಯ್ಯ(23) ಕೊಲೆಯಾದ ವಿದ್ಯಾರ್ಥಿಯಾಗಿದ್ದಾನೆ.

ಹೈದರಾಬಾದ್ ನ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಸಾದ್, ತನ್ನ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕೇಂದ್ರೀಯ ವಿವಿಯಲ್ಲಿ ಅರ್ಥಶಾಸ್ತ್ರ ವಿಭಾಗದಲ್ಲಿ ಓದುತ್ತಿದ್ದ ಗೆಳತಿಯೊಂದಿಗೆ ಜನುಮ ದಿನಾಚರಣೆ ಆಚರಣೆ ಮಾಡಿಕೊಳ್ಳಲು ಬಂದಿದ್ದ. ಸಂಜೆ 7 ಗಂಟೆಗೆ ವಿವಿ ಆವರಣದಲ್ಲಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾಗ ಅಪರಿಚಿತರು ಚಾಕುವಿನಿಂದ ಇರಿದಿದ್ದಾರೆ. ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಯುವಕ ಸಾವನ್ನಪ್ಪಿದ್ದಾನೆ.



Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಪಕ್ಷದ ವಿರುದ್ಧವೇ ಕಿಡಿಕಾರಿದ ಸಚಿವ