Select Your Language

Notifications

webdunia
webdunia
webdunia
webdunia

ಎರಡು ಗುಂಪಿನ ನಡುವಿನ ಘರ್ಷಣೆಯಲ್ಲಿ ಯುವಕ ಬಲಿ

ಎರಡು ಗುಂಪಿನ ನಡುವಿನ ಘರ್ಷಣೆಯಲ್ಲಿ ಯುವಕ ಬಲಿ
ಮಂಡ್ಯ , ಸೋಮವಾರ, 19 ನವೆಂಬರ್ 2018 (14:45 IST)
ಕ್ಷುಲ್ಲಕ ಕಾರಣಕ್ಕೆ ಯುವಕರ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಯುವಕನೊಬ್ಬ ಸಾವು ಕೊಲೆಯಲ್ಲಿ ಅಂತ್ಯಕಂಡಿದೆ.

ಯುವಕರ ನಡುವಿನ ಘರ್ಷಣೆಯು ಓರ್ವನ‌ ಕೊಲೆಯಲ್ಲಿ ಅಂತ್ಯವಾಗಿದೆ. ಘಟನೆಯಲ್ಲಿ ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ‌ ನಗುವನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಹರೀಶ್ (30) ಕೊಲೆಯಾದ ದುರ್ದೈವಿಯಾಗಿದ್ದಾನೆ.

ಆನಂದ್ (25) ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ಆತನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಚಾಕುವಿನಿಂದ ಇರಿದು ಕೊಂದಿರೋ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.  ಘಟನೆ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಉದ್ವಿಗ್ನ‌ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.




Share this Story:

Follow Webdunia kannada

ಮುಂದಿನ ಸುದ್ದಿ

ರೈತರ ಮೇಲೆ ಹಲ್ಲೆಗೆ ಖಂಡನೆ: ಶಾಸಕರ ಅಣಕು ಶವಯಾತ್ರೆ