Webdunia - Bharat's app for daily news and videos

Install App

ಸಂಸದ ಪ್ರಹ್ಲಾದ್ ಜೋಶಿ ಅವರಿಗೆ ಬೆದರಿಕೆ ಪತ್ರ; ಪತ್ರದಲ್ಲಿ ಏನಿದೆ ಗೊತ್ತಾ...?

Webdunia
ಶನಿವಾರ, 3 ಫೆಬ್ರವರಿ 2018 (13:04 IST)
ಧಾರವಾಡ : ಸಿ.ಟಿ.ರವಿ ಅವರ ನಂತರ ಮತ್ತೊಬ್ಬ ಬಿಜೆಪಿ ನಾಯಕರಾದ ಸಂಸದ ಪ್ರಹ್ಲಾದ್ ಜೋಶಿ ಅವರಿಗೆ ಕಿಡಿಗೇಡಿಗಳು ಕೊಲೆ ಬೆದರಿಕೆ ಪತ್ರ ಕಳುಹಿಸಿದ್ದಾರೆ.


ಮಂಜುನಾಥ್ ಆರ್.ಡಿ.ಹೆಸರಿನಿಂದ ‘ನಿಮ್ಮನ್ನು ನೋಡಿಕೊಳ್ಳುತ್ತೇವೆ’ ಎಂದು ಬೆದರಿಕೆ ಹಾಕಿದ್ದಾರೆ. ಹಾಗೆ ‘ ವಿ.ಕೆ.ಬಾಸ್ ಬಗ್ಗೆ ತುಂಬಾ ಹಗೆತನ ಸಾಧಿಸುತ್ತಿದ್ದೀರಿ. ಯೋಗೇಶ್ ಗೌಡ ಕೊಲೆ ಕೇಸ್ ಸಿಬಿಐ ತನಿಖೆಗೆ ಒಪ್ಪಿಸಬೇಕು ಅನ್ನೋದು ಸರಿಯಲ್ಲ. ನಮ್ಮ ಬಾಸ್ ಬಗ್ಗೆ ನಾಲಿಗೆ ಹರಿಬಿಟ್ಟರೆ ಕಥೆ ಮುಗಿಸುತ್ತೇವೆ’ ಎಂದು ಪತ್ರದಲ್ಲಿ ಬರೆದು ಬೆದರಿಕೆ ಒಡ್ಡಲಾಗಿದೆ.


ಈ ಬಗ್ಗೆ ಸಂಸದ ಪ್ರಹ್ಲಾದ್ ಜೋಶಿ ಅವರು ಪೊಲೀಸ್ ಆಯುಕ್ತರಿಗೆ ಲಿಖಿತ ದೂರು ನೀಡಿದ್ದಾರೆ. ಈ ಹಿಂದೆಯೂ ಅವರಿಗೆ ಹಲವರಿಂದ ಬೆದರಿಕೆಯ ಪತ್ರ ಬಂದಿದ್ದು, ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments