Select Your Language

Notifications

webdunia
webdunia
webdunia
webdunia

ಸಮಾಜ ಕಟ್ಟಲು ಸಾವಿರ ದಾರಿ ಇವೆ, ಮಂಜುನಾಥ್‌ಗೆ ಇದು ಬೇಕಿತ್ತಾ: ನಾಗತಿಹಳ್ಳಿ ಪ್ರಶ್ನೆ

Director NagathiHalli ChandraShekar

Sampriya

ಬೆಂಗಳೂರು , ಶನಿವಾರ, 16 ಮಾರ್ಚ್ 2024 (18:14 IST)
Photo Courtesy Facebook
ಬೆಂಗಳೂರು: ಬೆಂಗಳೂರು ಗ್ರಾಮಾಂತರದಿಂದ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎನ್. ಮಂಜುನಾಥ್ ಅವರಿಗೆ ಸಮಾಜ ಕಟ್ಟಲು ಸಾವಿರ ದಾರಿ ಇವೆ, ರಾಜಕೀಯ ಬೇಕಿತ್ತಾ ಎಂದು ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಪ್ರಶ್ನಿಸಿದ್ದಾರೆ. 
 
ಈ ನಡುವೆ ಡಾ. ಸಿ.ಎನ್. ಮಂಜುನಾಥ್ ಅವರು ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು ದುರದೃಷ್ಟಕರ ಎಂದು ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು ಮಂಜುನಾಥ್ ಅವರಿಗೆ ಇದು ನಿಮಗೆ ಬೇಕಿತ್ತೆ ಎಂದು ಪ್ರಶ್ನಿಸಿದ್ದಾರೆ.
 
ಸದ್ಯ ಇದೀಗ ನಾಗತಿಹಳ್ಳಿ ಚಂದ್ರಶೇಖರ್ ಅವರ ಪೋಸ್ಟ್‌ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್​ ಆಗುತ್ತಿದೆ. ಇವರ ಹೇಳಿಕೆಗೆ ಪರ ವಿರೋಧ ವ್ಯಕ್ತವಾಗುತ್ತಿದೆ. 
 
ನಾಗತಿಹಳ್ಳಿ ಚಂದ್ರಶೇಖರ್ ಬರೆದ ಪೋಸ್ಟ್‌ನಲ್ಲಿ ಹೀಗಿದೆ:
   ನಮ್ಮ ಪ್ರೀತಿಯ ವೈದ್ಯ
    ಡಾ. ಸಿ.ಎನ್. ಮಂಜುನಾಥ್ ರಾಜಕಾರಣ ಪ್ರವೇಶಿಸಿದ್ದು ದುರದೃಷ್ಟಕರ. ಕಾರಣ ಏನೇ ಇರಲಿ. ಇಲ್ಲಿ ಪಡೆದುದನ್ನು ಅಲ್ಲಿ ಕಳೆದುಕೊಳ್ಳಬಹುದೇನೋ. ಜನರ ಸೇವೆ ಮಾಡಲು ರಾಜಕಾರಣ ಒಂದೇ ದಾರಿ ಅಂತ ಯಾವ ಮೂರ್ಖ ಹೇಳಿದ? ಸಮಾಜವನ್ನು ಕಟ್ಟಲು ಸಾವಿರ ದಾರಿಗಳಿವೆ. ಮಂಜುನಾಥ್ ಇದು ನಿಮಗೆ ಬೇಕಿತ್ತೆ? ಎಂದು ಬರೆದುಕೊಂಡಿದ್ದಾರೆ. 
 
 

Share this Story:

Follow Webdunia kannada

ಮುಂದಿನ ಸುದ್ದಿ

ಮಾದರಿ ನೀತಿ ಸಂಹಿತೆ ಜಾರಿ: ಬೆಂಗಳೂರಿನಲ್ಲಿ ನಿಗಾಕ್ಕೆ ತುಷಾರ್ ಗಿರಿನಾಥ್ ಆದೇಶ