Select Your Language

Notifications

webdunia
webdunia
webdunia
webdunia

ಇಂದು ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರದ ಬಜೆಟ್ ಮಂಡನೆ

ಇಂದು ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರದ ಬಜೆಟ್ ಮಂಡನೆ
ಬೆಂಗಳೂರು , ಶುಕ್ರವಾರ, 8 ಫೆಬ್ರವರಿ 2019 (10:04 IST)
ಬೆಂಗಳೂರು : ಇಂದು ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರದ ಬಜೆಟ್ ಮಂಡನೆಯಾಗಲಿದ್ದು, ಮಧ್ಯಾಹ್ನ 12.30ಕ್ಕೆ ಹಣಕಾಸು ಸಚಿವರಾಗಿರುವ ಸಿಎಂ ಕುಮಾರಸ್ವಾಮಿ ಮೈತ್ರಿ ಸರ್ಕಾರದ ಎರಡನೇ ಬಜೆಟ್ ಮಂಡಿಸಲಿದ್ದಾರೆ.


ಈ ಬಾರಿಯ ಬಜೆಟ್ ನಲ್ಲಿ ರೈತರಿಗೆ  ವಿಶೇಷ ಕೊಡುಗೆಯನ್ನು ನಿರೀಕ್ಷೆಯಿದ್ದು, ರೈತರ ಬೆಳೆ ಸಾಲ ಮನ್ನಾ ಯೋಜನೆಗೆ ಹೆಚ್ಚಿನ ಹಣ ನಿಗದಿಪಡಿಸುವುದು, ರಾಷ್ಟ್ರೀಕೃತ ಬ್ಯಾಂಕ್ ನಲ್ಲಿರುವ ರೈತರ ಸಾಲ ಮನ್ನಾದ ಕುರಿತು ಪ್ರಕಟಿಸಲಿದ್ದಾರೆ. ಕೃಷಿಗೆ ಆದ್ಯತೆ ನೀಡಲಾಗುತ್ತದೆ. ಜೊತೆಗೆ ಕಡು ಬಡವರಿಗೆ ಅನುಕೂಲವಾಗುವಂತ `ದೀನಬಂಧು' ಎಂಬ ಹೊಸ ಯೋಜನೆಯನ್ನು ಘೋಷಿಸುತ ಸಾಧ್ಯತೆ ಇದೆ.


ಹಾಗೇ ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಸಂಸತ್ತಿನ ಮಾದರಿಯಲ್ಲಿ ಬಜೆಟ್ ಪ್ರತಿ ನೀಡಲು ನಿರ್ಧಾರ ಮಾಡಿದ್ದಾರೆ. ಬಿಜೆಪಿ ಗಲಾಟೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ಬಜೆಟ್ ಮಂಡನೆಯ ಆರಂಭದಲ್ಲಿಯೇ ಬಜೆಟ್ ಪ್ರತಿ ನೀಡದಿರಲು ನಿರ್ಧಾರ ತೆಗೆದುಕೊಳ್ಳಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರ ಇಳಿಕೆ