Select Your Language

Notifications

webdunia
webdunia
webdunia
webdunia

ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಉಪರಾಷ್ಟ್ರಪತಿ ವೆಂಕಯ್ಯ

ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಉಪರಾಷ್ಟ್ರಪತಿ ವೆಂಕಯ್ಯ
ಹುಬ್ಬಳ್ಳಿ , ಮಂಗಳವಾರ, 26 ಸೆಪ್ಟಂಬರ್ 2017 (14:06 IST)
ಹುಬ್ಬಳ್ಳಿ: ಗದಗದ ನರಗುಂದಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಹುಬ್ಬಳ್ಳಿ ವಿಮಾನ ‌ನಿಲ್ದಾಣಕ್ಕೆ ಬಂದಿಳಿದರು.

ಗದಗ ಜಿಲ್ಲೆಯ ನರಗುಂದದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ವೆಂಕಯ್ಯನಾಯ್ಡು ಅವರಿಗೆ, ರಾಜ್ಯಪಾಲ ವಜುಬಾಯಿ ವಾಲಾ ಸೇರಿದಂತೆ, ಬಿಜೆಪಿ ನಾಯಕರು ಸಾಥ್ ನೀಡಿದರು. ಇಂದು ನರಗುಂದದ ಕೊಣ್ಣೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಲಿದ್ದಾರೆ.

ನರಗುಂದ ತಾಲೂಕು ಬಯಲು ಬಹಿರ್ದೆಸೆ ಮುಕ್ತ ತಾಲೂಕು ಎಂದು ಉಪರಾಷ್ಟ್ರಪತಿಗಳು ಘೋಷಣೆ ಮಾಡಲಿದ್ದಾರೆ. ಭಾರತೀಯ ವಾಯುಸೇನೆ ಮೂರು ಹೆಲಿಕಾಪ್ಟರ್, ಉಪರಾಷ್ಟ್ರಪತಿ ಭದ್ರತೆ ನಿಯೋಜನೆ ಮಾಡಲಾಗಿದೆ‌. ವಿಮಾನ ನಿಲ್ದಾಣಕ್ಕೆ ಬಂದಿಳಿದ ಉಪರಾಷ್ಟ್ರಪತಿ‌ಗಳಿಗೆ ಮೇಯರ್ ಡಿ‌.ಕೆ.ಚೌಹಾಣ್ ಹೂಗುಚ್ಛ ನೀಡಿ ಸ್ವಾಗತಿಸಿದರು. ಬಳಿಕ ಹೆಲಿಕಾಪ್ಟರ್ ಮೂಲಕ ನರಗುಂದಕ್ಕೆ ಪ್ರಯಾಣ ಬೆಳೆಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ, ಜೆಡಿಎಸ್ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ