Select Your Language

Notifications

webdunia
webdunia
webdunia
webdunia

ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನಿರುದ್ಯೋಗಿಗಳಿಗೆ ಹೆಚ್ ಡಿ ಕೆ ಕೊಡಲಿರುವ ಗಿಫ್ಟ್ ಏನು ಗೊತ್ತಾ…?

ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನಿರುದ್ಯೋಗಿಗಳಿಗೆ ಹೆಚ್ ಡಿ ಕೆ ಕೊಡಲಿರುವ ಗಿಫ್ಟ್ ಏನು ಗೊತ್ತಾ…?
ಬೆಂಗಳೂರು , ಶನಿವಾರ, 13 ಜನವರಿ 2018 (14:59 IST)
ಬೆಂಗಳೂರು : ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ‘ಕುಮಾರ ಉದ್ಯೋಗ’ ಎಂಬ ಆ್ಯಪ್ ವೊಂದನ್ನು ಬಿಡುಗಡೆ ಮಾಡಿದ್ದು, ಸ್ವಾಮಿ ವಿವೇಕಾನಂದರ ಹುಟ್ಟುಹಬ್ಬಕ್ಕೆ ಕರ್ನಾಟಕದ ಯುವಕರಿಗೆ ತನ್ನದೊಂದು ಸಣ್ಣ ಉಡುಗೊರೆ ಎಂದು ಟ್ವೀಟ್ ಮಾಡಿದ್ದಾರೆ.

 
ಈ ಆ್ಯಪ್ ಮೂಲಕ ಕರ್ನಾಟಕದ ನಿರುದ್ಯೋಗಿಗಳಿಗೆ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಸರ್ಕಾರಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಕೊಡಿಸುವ ಭರವಸೆಯನ್ನು ನೀಡಿದೆ. ಸಾಮಾಜಿಕ ತಾಣಗಳಲ್ಲಿ ಈ ಸುದ್ದಿ ರವಾನೆಯಾಗುತ್ತಿದ್ದಂತೆ ಒಂದು ಗಂಟೆಯೊಳಗೆ ಎಂಟು ಸಾವಿರ ಮಂದಿ ನೋಂದಾವಣೆ ಮಾಡಿದ್ದಾರೆ.

 
ನೋಂದಾವಣೆಯ ಬಗ್ಗೆ ಮಾಹಿತಿ ಕೂಡ ನೀಡಿದ್ದು, ಅದು ಹೀಗಿದೆ, ನಿರುದ್ಯೋಗಿಗಳು “ಕುಮಾರ ಉದ್ಯೋಗ “ ಎನ್ನುವ ಅಂಡ್ರಾಯ್ಡ ಅಪ್ಲಿಕೇಶನ್ ಅನ್ನು ಗೂಗಲ್ ಅಂಡ್ರಾಯ್ಡ ಪ್ಲೇಸ್ಟೋರ್ ನಿಂದ ಡೌನ್ ಲೋಡ್ ಮಾಡಿಕೊಂಡು ತಮ್ಮ ವಿದ್ಯಾರ್ಹತೆ ಸಮೇತ ಮಾಹಿತಿ ಸಲ್ಲಿಸಬೇಕು.  ಈ ಮಾಹಿತಿಯನ್ನು ಪಡೆದು 2018 ರ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಸರ್ಕಾರಿ/ ಖಾಸಗಿ ಕಂಪೆನಿಗಳ ಜೊತೆ ಚರ್ಚಿಸಿ ವಿವರ ಸಲ್ಲಿಸಿದ ನಿರುದ್ಯೋಗಿಗಳಿಗೆ ಉದ್ಯೋಗವಕಾಶ ಕಲ್ಪಿಸಿ ಕೊಡುವುದಾಗಿ ಭರವಸೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಖಾದರ ಜೊತೆ ಕಾಣಿಸಿಕೊಂಡ ಇಲಿಯಾಸ್ ಕೊಲೆ