Select Your Language

Notifications

webdunia
webdunia
webdunia
webdunia

ಬಿ.ಎಸ್.ವೈ ಬಲೆ ಹೆಣೆದದ್ದು ಎಲ್ಲಿ ಗೊತ್ತಾ?

ಬಿ.ಎಸ್.ವೈ ಬಲೆ ಹೆಣೆದದ್ದು ಎಲ್ಲಿ ಗೊತ್ತಾ?
ರಾಯಚೂರು , ಶುಕ್ರವಾರ, 8 ಫೆಬ್ರವರಿ 2019 (17:20 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಪರೇಷನ ಕಮಲಕ್ಕೆ ಸದ್ದಿಲ್ಲದೇ ಬಲೆ ಹೆಣೆಯುತ್ತಿದ್ದಾರೆ ಎಂಬ ಸುದ್ದಿಗಳು ಹರಿದಾಡಲಾರಂಭಿಸಿವೆ. ಇದಕ್ಕೆ ಅವರು ವಾಸ್ತವ್ಯ ಮಾಡಿರುವುದು ಚರ್ಚೆಗೆ ಇಂಬು ಕೊಟ್ಟಿದೆ. 

ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ಬಿ.ಎಸ್.ಯಡಿಯೂರಪ್ಪ ವಾಸ್ತವ್ಯ ಮಾಡಿದ್ದರ ಸುತ್ತ ಅನುಮಾನದ ಹುತ್ತ ಆವರಿಸಿದೆ.

ದೇವದುರ್ಗ ಪಟ್ಟಣದಲ್ಲಿನ ಪ್ರವಾಸ ಮಂದಿರದಲ್ಲಿ ಕಳೆದ ಗುರುವಾರ ರಾತ್ರಿ ವಾಸ್ತವ್ಯ ಮಾಡುವ ಮೂಲಕ ಮೈತ್ರಿ ಸರ್ಕಾರ ಪತನಕ್ಕೆ ರಣತಂತ್ರ ರೂಪಿಸಿದ್ದರು ಎನ್ನುವ ಚರ್ಚೆಗಳು ನಡೆಯುತ್ತಿವೆ. ಅಲ್ಲದೇ ಜಿಲ್ಲೆಯ ಅತೃಪ್ತ ಕಾಂಗ್ರೆಸ್ ಶಾಸಕರನ್ನ ಸೆಳೆಯುವ ಪ್ರಯತ್ನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಮಸ್ಕಿ ಶಾಸಕ ಪ್ರತಾಪ್ ಗೌಡ ಸ್ವಪಕ್ಷದ ಮೇಲೆ ಮುನಿಸಿಕೊಂಡಿದ್ದರು. ಹಾಗಾಗಿ ಅವರಿಗೆ ರಾತ್ರೋರಾತ್ರಿ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ರಾಯಚೂರು ಗ್ರಾಮೀಣ ಶಾಸಕ ಬಸವನಗೌಡ ಅವರು ಅತೃಪ್ತಗೊಂಡಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು. ಹೀಗಾಗಿ ಅವರಿಗೂ ಸಹ ಮಹರ್ಷಿ ವಾಲ್ಮೀಕಿ ನಿಗಮ ಮಂಡಳಿ ಸ್ಥಾನವನ್ನು ಕಲ್ಪಿಸಲಾಗಿದೆ. 

ಆಡಿಯೋ ರಿಲೀಸ್:
ಶಾಸಕ ನಾಗನಗೌಡರ ಪುತ್ರ ಶರಣಗೌಡ ಅವರಿಗೆ ಬಿಎಸ್​ವೈ ಆಮಿಷ‌ ಒಡ್ಡಿದ್ದಾರೆ ಎನ್ನಲಾದ ಆಡಿಯೋವನ್ನು ಸಿಎಂ ಕುಮಾರಸ್ವಾಮಿ ರಿಲೀಸ್​ ಮಾಡಿದ್ದು, ರಾಜಕೀಯ ವಲವಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಹೀಗಾಗಿ ದೇವದುರ್ಗದ ಪ್ರವಾಸಿ ಮಂದಿರದಲ್ಲಿ ಅಪರೇಷನ್ ಕಮಲ ನಡೆಸಿರುವುದು ನಿಜವೇ ಎನ್ನುವ ಅನುಮಾನ ಹುಟ್ಟುಹಾಕಿದೆ. 

ಅಲ್ಲದೇ ಈ ಆರೋಪಕ್ಕೆ ಪ್ರತಿಕ್ರಿಯಿಸಿರುವ ಬಿ.ಎಸ್.ಯಡಿಯೂರಪ್ಪ, ಇದು ನಿಜವಾಗಿದ್ದರೆ ರಾಜಕೀಯವಾಗಿ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದ್ದಾರೆ. ಹೀಗಾಗಿ ದೇವದುರ್ಗದ ಪ್ರವಾಸಿ ಮಂದಿರದಲ್ಲಿ ತಂಗಿದ್ದ ಬಿ.ಎಸ್.ಯಡಿಯೂರಪ್ಪನವರ ರಣತಂತ್ರವೇನು? ರಾಜಕೀಯ ಗುಟ್ಟೇನು? ಎನ್ನುವುದು ಸೇರಿದಂತೆ ಹಲವು ಸಂಶಯಗಳು ಮೂಡಿವೆ.




Share this Story:

Follow Webdunia kannada

ಮುಂದಿನ ಸುದ್ದಿ

ಎಂಜಿ ರಸ್ತೆಯಲ್ಲೇ ಅವ್ಯವಹಾರ; ನಾಯಕರ ಪಡೆ ಮಾಡಿದ್ದೇನು?