Select Your Language

Notifications

webdunia
webdunia
webdunia
webdunia

ರಕ್ಷಣಾ ವೇದಿಕೆ ಅಧ್ಯಕ್ಷನಿಂದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ

ರಕ್ಷಣಾ ವೇದಿಕೆ ಅಧ್ಯಕ್ಷನಿಂದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ
ತುಮಕೂರು , ಬುಧವಾರ, 19 ಸೆಪ್ಟಂಬರ್ 2018 (21:06 IST)
ರಕ್ಷಣಾ ವೇದಿಕೆ ಅಧ್ಯಕ್ಷನಿಂದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ನಡೆದಿದೆ.

ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಕೋಟೆನಾಯಕನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮೀನಾಕ್ಷಮ್ಮ(45) ಹಲ್ಲೆ ಗೊಳಗಾದ ಮಹಿಳೆಯಾಗಿದ್ದಾರೆ. ಮಲ್ಲಿಕಾರ್ಜುನಯ್ಯ ರಕ್ಷಣಾ ವೇದಿಕೆ ತಿಪಟೂರು ತಾಲ್ಲೂಕು ಅಧ್ಯಕ್ಷನಾಗಿದ್ದಾನೆ.

ವಿಜಯ್ ಕುಮಾರ್ ಬಣದ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷನಾಗಿರುವ ಮಲ್ಲಿಕಾರ್ಜುನ ಪತ್ನಿಗೆ ಕುಡುಗೊಲಿನಿಂದ ತಲೆಗೆ ಹಲ್ಲೆ ನಡೆಸಿದ್ದಾನೆ. ಗಾಯಾಳು ಮಿನಾಕ್ಷಮ್ಮ ತಿಪಟೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಆಗಿದ್ದಾಳೆ. ಈ ಕುರಿತು
ತಿಪಟೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Share this Story:

Follow Webdunia kannada

ಮುಂದಿನ ಸುದ್ದಿ

ಬಿ.ಎಸ್. ಯಡಿಯೂರಪ್ಪ ವಿರುದ್ಧ ಪತ್ರ