Select Your Language

Notifications

webdunia
webdunia
webdunia
webdunia

ಯಡಿಯೂರಪ್ಪ ಅವಧಿಯಲ್ಲಿ 3500 ರೈತರ ಆತ್ಮಹತ್ಯೆ: ಬೆಚ್ಚಿ ಬೀಳಿಸಿದ ಸದಾನಂದಗೌಡ

ಯಡಿಯೂರಪ್ಪ ಅವಧಿಯಲ್ಲಿ 3500 ರೈತರ ಆತ್ಮಹತ್ಯೆ: ಬೆಚ್ಚಿ ಬೀಳಿಸಿದ ಸದಾನಂದಗೌಡ
ಮೈಸೂರು , ಮಂಗಳವಾರ, 23 ಜನವರಿ 2018 (19:49 IST)
ಯಡಿಯೂರಪ್ಪ ಅವರ ಸರ್ಕಾರದ ಅವಧಿಯಲ್ಲಿ ಮೂರುವರೆ ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತಹ ಮುಖ್ಯಮಂತ್ರಿ ನಮಗೆ ಬೇಕಾ ಎಂದು ಪ್ರಶ್ನೆ ಮಾಡಿದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಯಡವಟ್ಟು ಮಾಡಿಕೊಂಡಿದ್ದಾರೆ.

ಪರಿವರ್ತನಾ ಯಾತ್ರೆಯಲ್ಲಿ ಭಾಷಣ ಮಾಡಿದ ಅವರು, ಸಿದ್ದರಾಮಯ್ಯ ಹೆಸರು ಹೇಳಲು ಹೋಗಿ ಯಡಿಯೂರಪ್ಪ ಅವರ ಹೆಸರು ಹೇಳಿದ್ದಾರೆ. ವೇದಿಕೆಯಲ್ಲಿ ಕುಳಿತಿದ್ದ ಯಡಿಯೂರಪ್ಪ ತಬ್ಬಿಬ್ಬುಗೊಂಡರು.
 
ಅಧಿಕಾರಿಗಳನ್ನು ಕೆಲಸ ಮಾಡಲು ಬಿಡದೇ ಪದೇ ಪದೇ ವರ್ಗಾವಣೆ ಮಾಡುವ ಮೂಲಕ ಸಿದ್ದರಾಮಯ್ಯ ಕಳೆದ ನಾಲ್ಕೂವರೆ ವರ್ಷದಲ್ಲಿ ಏನೂ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ರಾಜಕೀಯ ಪಕ್ಷಗಳಿಗೆ 2 ಸಾವಿರಕ್ಕಿಂತ ಹೆಚ್ಚಿನ ದೇಣಿಗೆ ನೀಡಬೇಡಿ: ಐಟಿ ಇಲಾಖೆ