Select Your Language

Notifications

webdunia
webdunia
webdunia
webdunia

ಅನಂತ್ ಕುಮಾರ್ ಹೆಗಡೆಯನ್ನು ಸಂಪುಟದಿಂದ ವಜಾಗೊಳಿಸಿ - ರಾಹುಲ್ ಗಾಂಧಿ ಆಗ್ರಹ

ಅನಂತ್ ಕುಮಾರ್ ಹೆಗಡೆಯನ್ನು ಸಂಪುಟದಿಂದ ವಜಾಗೊಳಿಸಿ - ರಾಹುಲ್ ಗಾಂಧಿ ಆಗ್ರಹ
ನವದೆಹಲಿ , ಮಂಗಳವಾರ, 29 ಜನವರಿ 2019 (10:06 IST)
ನವದೆಹಲಿ : ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆಯವರು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರ  ವೈಯಕ್ತಿಕ ಜೀವನದ ಬಗ್ಗೆ ವಿವಾದಾತ್ನಕ ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ ಅನಂತ್ ಕುಮಾರ್ ಹೆಗಡೆ ಅವರನ್ನು ಸಂಪುಟದಿಂದ ವಜಾಗೊಳಿಸಿ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.


ಸಚಿವ ಅನಂತ್ ಕುಮಾರ್ ಹೆಗಡೆಯವರು ಕೆಪಿಸಿಸಿ ಅಧ್ಯಕ್ಷ ದಿನೆಶ್ ಗುಂಡುರಾವ್ ಅವರ  ಟ್ವೀಟ್ ಗೆ ಪ್ರತಿಕ್ರಿಯಿಸಿ ‘ತಮ್ಮ ಕೊಡುಗೆ, ಸಾಧನೆ ಏನೆಂದು ಹೇಳಲಿ. ನೀವು  ಮುಸ್ಲಿಂ ಮಹಿಳೆಯ ಹಿಂದೆ ಹೋದರಲ್ಲವೇ ‘ ಎಂದು ಹೇಳಿದ್ದರು. ಈ ಹೇಳಿಕೆ ಈಗ ವ್ಯಾಪಕ ಟೀಕೆಗೆ ಗುರಿಯಾಗಿದೆ.


ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಹುಲ್‌ ಗಾಂಧಿ, 'ಈ ಸಚಿವ ಪ್ರತಿಯೊಬ್ಬ ಭಾರತೀಯನೂ ಮುಜುಗರದಿಂದ ತಲೆ ತಗ್ಗಿಸುವಂತೆ ಮಾಡುತ್ತಿದ್ದಾರೆ. ಸಚಿವರಾಗಿರುವುದಕ್ಕೆ ಇವರು ಅಯೋಗ್ಯರು. ಸಂಪುಟದಿಂದ ತಕ್ಷಣ ಕಿತ್ತು ಹಾಕಬೇಕು ,'ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಆಗ್ರಹಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಇನ್ನಿಲ್ಲ