Select Your Language

Notifications

webdunia
webdunia
webdunia
webdunia

ಮೋದಿ ಸರ್ಕಾರಕ್ಕೆ ಶಾಕ್ ಕೊಡಲು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ರೆಡಿ

ಮೋದಿ ಸರ್ಕಾರಕ್ಕೆ ಶಾಕ್ ಕೊಡಲು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ರೆಡಿ
ನವದೆಹಲಿ , ಗುರುವಾರ, 8 ಮಾರ್ಚ್ 2018 (09:51 IST)
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ನಾಲ್ಕು ವರ್ಷ ಪೂರೈಸುತ್ತಿರುವ ಬೆನ್ನಲ್ಲೇ ಶಾಕ್ ನೀಡಲು ಮಿತ್ರಪಕ್ಷ ಟಿಡಿಪಿ ಸಿದ್ಧವಾಗಿದೆ.

ಸಿಎಂ ಚಂದ್ರಬಾಬು ನಾಯ್ಡು ಮೈತ್ರಿ ಮುರಿದುಕೊಳ್ಳಲು ಮುಂದಾಗಿದ್ದು ತಮ್ಮ ಪಕ್ಷದ ಇಬ್ಬರು ಕೇಂದ್ರ ಸಚಿವರಿಗೆ ರಾಜೀನಾಮೆ ನೀಡಲು ಸೂಚಿಸಿದ್ದಾರೆ.

ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂಬ ಮನವಿಗೆ ಪ್ರಧಾನಿ ಮೋದಿ ಕಿವಿಗೊಟ್ಟಿಲ್ಲ ಎನ್ನುವ ಮುನಿಸಿಗೆ ಚಂದ್ರ ಬಾಬು ನಾಯ್ಡು ಈ ನಿರ್ಧಾರಕ್ಕೆ ಬಂದಿದ್ದಾರೆ. ಆಂಧ್ರಕ್ಕೆ ವಿಶೇಷ ಪ್ಯಾಕೇಜ್ ನೀಡಲಾಗುವುದು ಎಂಬ ಭರವಸೆಯೊಂದಿಗೆ ಕೇಂದ್ರ ಸಂಪುಟಕ್ಕೆ  ಸೇರ್ಪಡೆಗೊಂಡಿತ್ತು.

ಆದರೆ ಇದೀಗ ಭರವಸೆ ಈಡೇರಿಸಿಲ್ಲ. ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡಲಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ಅಸಮಾಧಾನಗೊಂಡಿರುವ ಚಂದ್ರಬಾಬು ನಾಯ್ಡು ಸಂಪುಟದಿಂದ ಹೊರಬರುವ ನಿರ್ಧಾರ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ತಂದೆಗೆ ಚೂರಿ ಇರಿತ ಸುದ್ದಿ ಕೇಳಿಯೂ ಲೋಕಾಯುಕ್ತ ವಿಶ್ವನಾಥ್ ಪುತ್ರ ಮಾಡಿದ ಕೆಲಸವೇನು ಗೊತ್ತಾ?!