Webdunia - Bharat's app for daily news and videos

Install App

ಒಂದು ಕೆಜಿ ಈರುಳ್ಳಿಗೆ 5 ಪೈಸೆ?

Webdunia
ಬುಧವಾರ, 24 ಆಗಸ್ಟ್ 2016 (17:22 IST)
ಮಹಾರಾಷ್ಟ್ರದಲ್ಲಿ ಈರುಳ್ಳಿ ಸಗಟು ಮಾರಾಟ ಬೆಲೆ ನೆಲಕಚ್ಚಿದ್ದು, ಹರಾಜೊಂದರಲ್ಲಿ ರೈತನಿಗೆ ಒಂದು ಕೆ.ಜಿ ಈರುಳ್ಳಿಯನ್ನು ಐದು ಪೈಸೆಗೆ ಕೇಳಲಾಗಿದೆ. ಇದು ಸಗಟು ಮಾರುಕಟ್ಟೆಯಲ್ಲಿ ರೈತರು ಎದುರಿಸುತ್ತಿರುವ ದಯನೀಯ ಸ್ಥಿತಿಯನ್ನು ಜಾಹೀರುಗೊಳಿಸಿದೆ.

ಈರುಳ್ಳಿಯ ಅತಿರಿಕ್ತ ಉತ್ಪಾದನೆಯಿಂದಾಗಿ ಕಳೆದ ಎರಡು ತಿಂಗಳಿಂದ ರೈತರ ಪರಿಸ್ಥಿತಿ ಶೋಚನೀಯವಾಗುತ್ತಿದೆ. ಮಂಗಳವಾರ ಹರಾಜಿನಲ್ಲಿ ಪಾಲ್ಗೊಂಡಿದ್ದ ನನಗೆ ಒಂದು ಕಿಲೋಗೆ ಐದು ಪೈಸೆಯನ್ನು ಆಫರ್ ಮಾಡಲಾಯಿತು ಎಂದು ನಿಪಾಡ್ ತಾಲ್ಲೂಕಿನ ಸೈಖೇಡಾದ ರೈತ ಸುಧಾಕರ್ ದಾರದೆ ಅಳಲು ತೋಡಿಕೊಂಡಿದ್ದಾರೆ. 
 
ತಾನು ಕಷ್ಟಪಟ್ಟು ಬೆಳೆದಿರುವ ಉತ್ಪನ್ನಕ್ಕೆ ಬೆಲೆಯೇ ಸಿಗದ ನೋವಿನಲ್ಲಿ ರೈತ ಸರಕಿನೊಂದಿಗೆ ಮನೆಗೆ ಹಿಂತಿರುಗಿದ್ದಾನೆ.
 
ಬರದ ಪರಿಣಾದಿಂದಾಗಿ ಆಗಸ್ಟ್ 21, 2015ರಲ್ಲಿ ಈರುಳ್ಳಿ ಬೆಲೆ ಕ್ವಿಂಟಾಲ್‌ಗೆ 5824ಕ್ಕೆ ಏರಿತ್ತು. ಆಗ ರೈತರು ಪ್ರತಿ ಕೆಜಿಗೆ 54 ರೂಪಾಯಿಯನ್ನು ಪಡೆದಿದ್ದರು. ಈರುಳ್ಳಿ ಬೆಲೆ ಈ ಮಟ್ಟದಲ್ಲಿ ಏರಿದ್ದನ್ನು ಕಂಡ ರೈತರು ಈ ಬಾರಿ ಬೆಳೆಯಲು ಇದೇ ಬೆಳೆಯನ್ನು ಆಯ್ದುಕೊಂಡರು. 
 
ಇನ್ನೊಂದು ಕಾರಣವೇನೆಂದರೆ ಬರದ ಕಾರಣಕ್ಕೆ ಹಲವಾರು ರೈತರು ಕಬ್ಬಿನ ಬದಲಾಗಿ ಈರುಳ್ಳಿಯನ್ನೇ ಆಯ್ದುಕೊಂಡರು. ಆದರೆ ಈಗ ಅತಿರಿಕ್ತ ಉತ್ಪಾದನೆಯಿಂದಾಗಿ ಬೆಲೆಯೇ ಇಲ್ಲದಂತಾಗಿದೆ ಎಂದು ಪುಣೆ ಮೂಲದ ಕೃಷಿ ವಿಶ್ಲೇಷಕರಾದ ದೀಪಕ್ ಚವನ್ ಹೇಳುತ್ತಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments