Select Your Language

Notifications

webdunia
webdunia
webdunia
webdunia

ತಾಕತ್ತಿದ್ರೆ ನಮ್ಮಂತೆ ಸರಕಾರ ನೌಕರರ ವೇತನ ಹೆಚ್ಚಿಸಿ: ಬಿಜೆಪಿ, ಕಾಂಗ್ರೆಸ್‌ಗೆ ಕೇಜ್ರಿವಾಲ್ ಸವಾಲ್

ತಾಕತ್ತಿದ್ರೆ ನಮ್ಮಂತೆ ಸರಕಾರ ನೌಕರರ ವೇತನ ಹೆಚ್ಚಿಸಿ: ಬಿಜೆಪಿ, ಕಾಂಗ್ರೆಸ್‌ಗೆ ಕೇಜ್ರಿವಾಲ್ ಸವಾಲ್
ನವದೆಹಲಿ , ಬುಧವಾರ, 17 ಆಗಸ್ಟ್ 2016 (20:35 IST)
ರಾಜ್ಯ ಸರಕಾರಿ ನೌಕರರ ವೇತನ ಹೆಚ್ಚಳ ಸಮರ್ಥಿಸಿಕೊಂಡ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಹಣ ಬಡವರು ಮತ್ತು ಮಧ್ಯಮ ವರ್ಗದವರ ಕೈಯಲ್ಲಿರಬೇಕೇ ಹೊರತು ಅಂಬಾನಿ ಮತ್ತು ಆದಾನಿಯಲ್ಲಿರುವುದರಿಂದ ದೇಶದ ಆರ್ಥಿಕತೆಗೆ ಯಾವುದೇ ಲಾಭವಾಗುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ತಾವೇ ಅಧಿಕಾರರೂಡವಿರುವ ರಾಜ್ಯಗಳಲ್ಲಿ ಇಂತಹ ತೀರ್ಮಾನ ತೆಗೆದುಕೊಳ್ಳುವ ಧೈರ್ಯ ತೋರಲಿವೆಯೇ ಎಂದು ಪ್ರಶ್ನಿಸಿದರು.
 
ಮುಷ್ಕರ ನಡೆಸಿ ದೇಶಾದ್ಯಂತ ವಹಿವಾಟು ಸ್ಥಗಿತಗೊಳಿಸುವುದರಿಂದ ಯಾವುದೇ ಮುಷ್ಕರ ನಿರತ ಸಂಘಟನೆಗಳಿಗೆ ಲಾಭವಾಗುವುದಿಲ್ಲ. ಬಡವರಿಗೆ ಹಣ ತಲುಪಿದಾಗ ದೇಶದ ಆರ್ಥಿಕತೆ ಚೇತರಿಕೆ ಕಾಣಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. 
 
ದೇಶದ ಆರ್ಥಿಕ ನೀತಿಗಳು ಬಡವರಿಗೆ ಲಾಭವಾಗುವಂತಿರಬೇಕು. ದೈನಂದಿನ ವೆಚ್ಚದಲ್ಲಿ ಹೆಚ್ಚಳವಾಗಿದೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ, ದೀರ್ಘಾವಧಿಯಲ್ಲಿ ಬಡವರು ಮತ್ತು ಮಧ್ಯಮ ವರ್ಗದವರಿಗೆ ಲಾಭವಾಗಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ಬಲೂಚಿಸ್ತಾನ್ ಹೇಳಿಕೆಗೆ ತಿರುಗೇಟು ನೀಡಿದ ಬಿಲಾವಲ್ ಭುಟ್ಟೋ