Webdunia - Bharat's app for daily news and videos

Install App

ಫ್ರಾನ್ಸ್ ಫುಟ್ಬಾಲ್ ವಿಶ್ವಕಪ್ ಗೆದ್ದ ಖುಷಿಯಲ್ಲಿ ಎಡವಟ್ಟು ಟ್ವೀಟ್ ಮಾಡಿದ ಕಿರಣ್ ಬೇಡಿ

Webdunia
ಸೋಮವಾರ, 16 ಜುಲೈ 2018 (10:37 IST)
ಪುದುಚೇರಿ: ಫಿಫಾ 2018 ವಿಶ್ವಕಪ್ ಫುಟ್ಬಾಲ್ ಫೈನಲ್ ನಲ್ಲಿ ಫ್ರಾನ್ಸ್ ಗೆದ್ದ ಖುಷಿಯಲ್ಲಿ ವಿಶ್ವದಾದ್ಯಂತ ಅಭಿಮಾನಿಗಳು ಖುಷಿಪಡುತ್ತಿದ್ದರೆ ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಕೂಡಾ ಶುಭಾಷಯ ಕೋರಿದ್ದಾರೆ.

ಆದರೆ ಶುಭಾಷಯ ಕೋರಿ ಟ್ವೀಟ್ ಮಾಡುವಾಗ ಎಡವಟ್ಟು ಮಾಡಿದ್ದು, ಇದೀಗ ಟ್ರೋಲಿಗರ ಟೀಕೆಗೆ ತುತ್ತಾಗಿದ್ದಾರೆ. ‘ನಾವು ಪುದುಚೇರಿಯವರು (ಹಿಂದೆ ಫ್ರೆಂಚ್ ಆಡಳಿತದಲ್ಲಿದ್ದ ಪುದುಚೇರಿ) ಕಪ್ ಗೆದ್ದೆವು. ಸ್ನೇಹಿತರೇ ಅಭಿನಂದನೆಗಳು. ಕ್ರೀಡೆ ಒಂದುಗೂಡಿಸುತ್ತದೆ’ ಎಂದು ಕಿರಣ್ ಬೇಡಿ ಟ್ವೀಟ್ ಮಾಡಿದ್ದರು.

ಆದರೆ ಪುದುಚೇರಿಯನ್ನು ಫ್ರಾನ್ಸ್ ಎಂದು ಹೋಲಿಸಿದ್ದಕ್ಕೆ ಟ್ವಿಟರಿಗರು ಟ್ರೋಲ್ ಮಾಡಿದ್ದಾರೆ. ನಾವ್ಯಾಕೆ ಇನ್ನೂ ವಸಾಹತು ಮನಸ್ಥಿತಿಯಲ್ಲೇ ಇದ್ದೇವೆ? ಎಂದು ಕೆಲವರು ಹೇಳಿದರೆ ಇನ್ನು ಕೆಲವರು ಇದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದ್ದಾರೆ. ಮತ್ತೆ ಪುದುಚೇರಿ ವಾಸಿಗಳು ನಮಗೆ ಫ್ರಾನ್ಸ್ ಗೆದ್ದರೆ ನಾವೇ ಗೆದ್ದಂತೆ ಅನಿಸುವುದಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments