Select Your Language

Notifications

webdunia
webdunia
webdunia
webdunia

ಈ ವಿಷಯಕ್ಕೆ ರಮ್ಯಾ ಇನ್ನು ಪ್ರಧಾನಿ ಮೋದಿಯನ್ನು ಟೀಕಿಸುವಂತಿಲ್ಲ!

ಈ ವಿಷಯಕ್ಕೆ ರಮ್ಯಾ ಇನ್ನು ಪ್ರಧಾನಿ ಮೋದಿಯನ್ನು ಟೀಕಿಸುವಂತಿಲ್ಲ!
ನವದೆಹಲಿ , ಶನಿವಾರ, 26 ಆಗಸ್ಟ್ 2017 (09:27 IST)
ನವದೆಹಲಿ: ಪ್ರಧಾನಿ ಮೋದಿ ಪ್ರವಾಹ ಪೀಡಿತ ಸ್ಥಳಕ್ಕೆ ಭೇಟಿ ನೀಡಿಲ್ಲವೆಂದು ನಟಿ, ಮಾಜಿ ಸಂಸದೆ ರಮ್ಯಾ ಟೀಕೆ ಮಾಡಿದ್ದರು. ಆದರೆ ಇದೀಗ ಟೀಕಾಕಾರರ ಬಾಯಿಗೆ ಬೀಗ ಬೀಳಲಿದೆ.


ಪ್ರಧಾನಿ ಮೋದಿ ಇಂದು ಬಿಹಾರದ ಪ್ರವಾಹ ಪೀಡಿತ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ನಿತೀಶ್ ಕುಮಾರ್ ಕೂಡಾ ಸಾಥ್ ನೀಡುವ ಸಾಧ್ಯತೆಯಿದೆ.

ರಾಷ್ಟ್ರೀಯ ವಿಪತ್ತು ದಳದ ಅಂದಾಜಿನ ಪ್ರಕಾರ ಬಿಹಾರದಲ್ಲಿ ಪ್ರವಾಹದಿಂದಾಗಿ 158 ಲಕ್ಷಕ್ಕೂ ಅಧಿಕ ಮಂದಿ ಪ್ರವಾಹದಿಂದಾಗಿ ಸಂಕಷ್ಟಕ್ಕೀಡಾಗಿದ್ದಾರೆ. ಇತ್ತೀಚೆಗಷ್ಟೇ ನಟಿ ರಮ್ಯಾ ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರವಾಹ ಪೀಡಿತರೊಂದಿಗೆ ಪ್ರಧಾನಿ ಮೋದಿ ಇರುವ ಫೋಟೋ ತೋರಿಸಿದರೆ 25 ಸಾವಿರ ರೂ. ಬಹುಮಾನ ನೀಡುವುದಾಗಿ ಹೇಳಿದ್ದರು. ಇದು ವ್ಯಾಪಕ ಟೀಕೆಗೆ ಗುರಿಯಾಗಿತ್ತು.

ಇದನ್ನೂ ಓದಿ.. ಪ್ರಿಯಾಂಕಾ ವಾದ್ರಾ ಆಸ್ಪತ್ರೆಗೆ ದಾಖಲು
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಿಯಾಂಕಾ ವಾದ್ರಾ ಆಸ್ಪತ್ರೆಗೆ ದಾಖಲು