Select Your Language

Notifications

webdunia
webdunia
webdunia
webdunia

ಸುನಂದಾ ಪುಷ್ಕರ್ ಸಾವು ಪ್ರಕರಣ: ಶಶಿ ತರೂರ್ ಗೆ ನಿರೀಕ್ಷಣಾ ಜಾಮೀನು

ಸುನಂದಾ ಪುಷ್ಕರ್ ಸಾವು ಪ್ರಕರಣ: ಶಶಿ ತರೂರ್ ಗೆ ನಿರೀಕ್ಷಣಾ ಜಾಮೀನು
ನವದೆಹಲಿ , ಗುರುವಾರ, 5 ಜುಲೈ 2018 (10:22 IST)
ನವದೆಹಲಿ: ಪತ್ನಿ ಸುನಂದಾ ಪುಷ್ಕರ್ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಶಶಿ ತರೂರ್ ಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ.
 

ದೆಹಲಿಯ ಪಂಚತಾರಾ ಹೋಟೆಲ್ ಕೊಠಡಿಯಲ್ಲಿ ಅನುಮಾಸ್ಪದ ಸ್ಥಿತಿಯಲ್ಲಿ ಸುನಂದಾ ಮೃತದೇಹ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ, ಸಂಸದ ಶಶಿ ತರೂರ್ ರನ್ನು ಆರೋಪ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲಾಗಿತ್ತು.

ಈ ಸಂಬಂಧ ಬಂಧನ ಭೀತಿ ಎದುರಿಸುತ್ತಿದ್ದ ಶಶಿ ತರೂರ್ ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಿನ್ನೆ ಪೂರ್ಣಗೊಳಿಸಿದ್ದ ಕೋರ್ಟ್ ಇಂದು ತರೂರ್ ಗೆ ಜಾಮೀನು ಮಂಜೂರು ಮಾಡಿ ತೀರ್ಪಿತ್ತಿದೆ.

1 ಲಕ್ಷ ರೂ. ಶ್ಯೂರಿಟಿ ಪಡೆದು ತರೂರ್ ಗೆ ಜಾಮೀನು ಮಂಜೂರು ಮಾಡಿರುವ ನ್ಯಾಯಾಲಯ, ಭಾರತ ಬಿಟ್ಟು ತೆರಳದಂತೆ ಆದೇಶ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಡಿಕೆಶಿ, ಜಮೀರ್ ಅಹಮ್ಮದ್ ಗೆ ಸದನದಲ್ಲೇ ಸಭಾಪತಿಗಳಿಂದ ಕ್ಲಾಸ್!