Select Your Language

Notifications

webdunia
webdunia
webdunia
webdunia

ಹುತಾತ್ಮ ಯೋಧನ ಪಾರ್ಥಿವ ಶರೀರದ ಮುಂದೆ ಸೆಲ್ಫಿ ತೆಗೆದ ಕೇಂದ್ರ ಸಚಿವ

ಹುತಾತ್ಮ ಯೋಧನ ಪಾರ್ಥಿವ ಶರೀರದ ಮುಂದೆ ಸೆಲ್ಫಿ ತೆಗೆದ ಕೇಂದ್ರ ಸಚಿವ
ತಿರುವಂತನಪುರ , ಸೋಮವಾರ, 18 ಫೆಬ್ರವರಿ 2019 (11:29 IST)
ತಿರುವಂತನಪುರ : ಪುಲ್ವಾಮದಲ್ಲಿ ಉಗ್ರರ  ದಾಳಿಗೆ ಬಲಿಯಾದ ಯೋಧರೊಬ್ಬರ ಪಾರ್ಥಿವ ಶರೀರದ ಮುಂದೆ ಕೇಂದ್ರ ಸಚಿವರೊಬ್ಬರು ಸೆಲ್ಫಿ ತೆಗೆದುಕೊಂಡು ಇದೀಗ ಸಾರ್ಜನಿಕರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.


ಪುಲ್ವಾಮನಲ್ಲಿ ನಡೆದ ಉಗ್ರರ ದಾಳಿಗೆ 44 ಯೋಧರು ಬಲಿಯಾಗಿದ್ದಕ್ಕೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ. ಆದರೆ ಹುತಾತ್ಮರಾಗಿದ್ದ ಕೇರಳದ ವಯ್ನಾಡ್​​ ಜಿಲ್ಲೆಯ ಲಕ್ಕಿದಿ ಯೋಧ ವಸಂತ್​ಕುಮಾರ್​​ ವಿ.ವಿ. ಅಂತಿಮ ದರ್ಶನ ಪಡೆಯಲು ಆಗಮಿಸಿದ್ದ ಸಚಿವ ಅಲ್ಫಾನ್ಸೋ ಕಣ್ಣನ್ ​ಥಾನಮ್ ಪಾರ್ಥಿವ ಶರೀರದ ಮುಂದೆ ಸೆಲ್ಫಿ ತೆಗೆದುಕೊಂಡಿದ್ದಾರೆ.


ಇದು ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಸಚಿವರ ಈ ವರ್ತನೆಯನ್ನು ಖಂಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಈ ಫೋಟೋ ಟ್ರೋಲ್​ ಆಗುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಅನಾಮಿಕ ವ್ಯಕ್ತಿಯಿಂದ ಸಚಿವ ಅನಂತ್ ಕುಮಾರ್ ಹೆಗಡೆಗೆ ಜೀವ ಬೆದರಿಕೆ ಕರೆ