Select Your Language

Notifications

webdunia
webdunia
webdunia
webdunia

ಉ.ಪ್ರದೇಶವನ್ನು "ರೋಗಿ" ಯಾಗಿಸಿದ ಸಿಎಂ ಯೋಗಿ: ಕಾಂಗ್ರೆಸ್

ಉ.ಪ್ರದೇಶವನ್ನು
ಲಕ್ನೋ , ಸೋಮವಾರ, 4 ಸೆಪ್ಟಂಬರ್ 2017 (20:31 IST)
ವೈದ್ಯಕೀಯ ಸೌಲಭ್ಯದಲ್ಲಿ ಆಮ್ಲಜನಕದ ಪೂರೈಕೆಯ ಕೊರತೆಯಿಂದಾಗಿ ಒಂದು ತಿಂಗಳಿನಲ್ಲಿ 49 ಮಕ್ಕಳು ಮೃತಪಟ್ಟಿದ್ದ ಫರೂಕಾಬಾದ್ ದುರಂತದ ಬಗ್ಗೆ ಟೀಕಿಸಿದ ಕಾಂಗ್ರೆಸ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಡೀ ರಾಜ್ಯ ರೋಗಿಯಾಗಿಸಿದ್ದಾರೆ ಎಂದು ಕಿಡಿಕಾರಿದೆ.
"ನೀವು ಉತ್ತರ ಪ್ರದೇಶದಿಂದ ಬಂದವರು. ರಾಜ್ಯದ ಜನತೆಯ ಆರೋಗ್ಯವನ್ನು ಕಾಪಾಡುವುದು ನಿಮ್ಮ ನೇರ ಜವಾಬ್ದಾರಿ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯವನ್ನು ಆಳಲು ಅಸಮರ್ಥನಾಗಿದ್ದಾರೆ. ಅವರನ್ನು ಶೀಘ್ರದಲ್ಲೇ ಬದಲಾಯಿಸಬೇಕು ಎಂದು ಉತ್ತರಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ರಾಜ್ ಬಬ್ಬರ್ ವಾಗ್ದಾಳಿ ನಡೆಸಿದ್ದಾರೆ. 
 
ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಅಬ್ಬರಿಸಿದ ಬಬ್ಬರ್, ಇಂತಹ ಘೋರ ದುರಂತವನ್ನು ನಿರ್ಲಕ್ಷಿಸಿ ಆರೆಸ್ಸೆಸ್ ಸಭೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ