Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದು, ಡಿಕೆಶಿ ಭೇಟಿ ಮಾಡಿದ ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್

Karthik Mahesh

Krishnaveni K

ಬೆಂಗಳೂರು , ಬುಧವಾರ, 14 ಫೆಬ್ರವರಿ 2024 (15:49 IST)
Photo Courtesy: Twitter
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 10 ರ ವಿಜೇತ ಕಾರ್ತಿಕ್ ಮಹೇಶ್ ಇದೀಗ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.

ಬಿಗ್ ಬಾಸ್ ವಿನ್ ಆದ ಮೇಲೆ ಕಾರ್ತಿಕ್ ಮಹೇಶ್ ಜನಪ್ರಿಯತೆ ಹೆಚ್ಚಾಗಿದೆ. ಎಲ್ಲೇ ಹೋದರೂ ಜನ ಅವರನ್ನು ಗುರುತಿಸುತ್ತಿದ್ದಾರೆ. ಬಿಗ್ ಬಾಸ್ ನಿಂದ ಹೊರಬಂದ ಮೇಲೆ ಪುನೀತ್ ರಾಜ್ ಕುಮಾರ್ ಸಮಾಧಿಗೆ ಭೇಟಿ ನೀಡಿ ಕಪ್ ನ್ನು ಸಮಾಧಿ ಮುಂದೆ ಇಟ್ಟು ನಮನ ಸಲ್ಲಿಸಿದ್ದರು.

ಇದೀಗ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಅವರ ಕೈಗೆ ಕಪ್ ಒಪ್ಪಿಸಿ ಫೋಟೋ ತೆಗೆಸಿಕೊಂಡಿದ್ದಾರೆ. ಈ ವೇಳೆ ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಭಾಮಾ ಹರೀಶ್ ಕೂಡಾ ಇದ್ದರು. ಬಿಗ್ ಬಾಸ್ ಕಪ್ ಸಮೇತ ಬಂದಾಗ ಕಾರ್ತಿಕ್ ಯಾರು, ಏನು ಎಂದೆಲ್ಲಾ ವಿಚಾರಿಸಿಕೊಂಡಿದ್ದಾರೆ. ಬಳಿಕ ಕಾರ್ತಿಕ್ ಜೊತೆ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಫೋಟೋ ತೆಗೆದುಕೊಂಡ್ರಾ ಎಂದು ಖಚಿತಪಡಿಸಿಕೊಂಡು ಮುಖ್ಯಮಂತ್ರಿಗಳು ಅಲ್ಲಿಂದ ತೆರಳಿದ್ದಾರೆ. ಬಳಿಕ ಡಿಕೆ ಶಿವಕುಮಾರ್ ಅವರ ಜೊತೆಗೂ ಕಾರ್ತಿಕ್ ಫೋಟೋ ತೆಗೆಸಿಕೊಂಡಿದ್ದಾರೆ. ಈ ವೇಳೆ ಡಿಕೆಶಿ ನಿಮ್ಮ ಹೆಸರೇನು ಎಂದು ಕಾರ್ತಿಕ್ ಅವರನ್ನು ಪರಿಚಯಮಾಡಿಕೊಂಡಿದ್ದಾರೆ. ಬಳಿಕ ಶುಭಾಶಯ ತಿಳಿಸಿ ತೆರಳಿದ್ದಾರೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಯುಐ ಸಿನಿಮಾದಲ್ಲಿ ಉಪೇಂದ್ರರ ಚೀಪ್ ಹಾಡಿನ ಸಾಲು ಕೇಳಿ ತಲೆಕೆಡಿಸಿಕೊಂಡ ಪ್ರೇಕ್ಷಕರು