Select Your Language

Notifications

webdunia
webdunia
webdunia
webdunia

ದಿನೇಶ್ ಗುಂಡೂರಾವ್ ಗೆ ಚಪ್ಪಲಿ ಪಾರ್ಸೆಲ್ ಮಾಡಲು ಮುಂದಾದ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು

ದಿನೇಶ್ ಗುಂಡೂರಾವ್ ಗೆ ಚಪ್ಪಲಿ ಪಾರ್ಸೆಲ್ ಮಾಡಲು ಮುಂದಾದ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು
ಮಂಗಳೂರು , ಮಂಗಳವಾರ, 17 ಏಪ್ರಿಲ್ 2018 (15:27 IST)
ಮಂಗಳೂರು : ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಬಂದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ವಿವಾದಾತ್ಮಕ ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ ಇದೀಗ ಅವರ  ವಿರುದ್ದ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿದೆ.


ಸೋಮವಾರ ಸಂಜೆ ಮಂಗಳೂರಿನಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ದಿನೇಶ ಗುಂಡೂರಾವ್ ಹಾಗೂ ಕಾಂಗ್ರೆಸ್  ವಿರುದ್ದ ಘೋಷಣೆ ಕೂಗಿದ್ದಾರೆ. ಅವರ ಚಪ್ಪಲಿ ಹೇಳಿಕೆಯ ವಿರುದ್ಧವಾಗಿ ಹಳೆ ಚಪ್ಪಲಿಗಳನ್ನು  ಸಂಗ್ರಹಿಸಿದ ಬಿಜೆಪಿ ಯುವಮೋರ್ಚಾದ ಕಾರ್ಯಕರ್ತರು ಕೊರಿಯರ್ ಮೂಲಕ ಅವುಗಳನ್ನು ದಿನೇಶ್ ಗುಂಡೂರಾವ್ ಅವರಿಗೆ ಪಾರ್ಸೆಲ್ ಮಾಡಲು ಮುಂದಾಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನಮ್ಮ ಸಮುದಾಯಕ್ಕೆ ಬಿಜೆಪಿ ಅನ್ಯಾಯ ಮಾಡಿದೆ: ಮಾಜಿ ಸಂಸದ ಶಿವರಾಮೇಗೌಡ