Select Your Language

Notifications

webdunia
webdunia
webdunia
webdunia

ಮೋದಿ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು ನೀಡಿದ ಕಾಂಗ್ರೆಸ್

ಮೋದಿ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು ನೀಡಿದ ಕಾಂಗ್ರೆಸ್
ಬೆಂಗಳೂರು , ಮಂಗಳವಾರ, 8 ಮೇ 2018 (06:39 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಹಾದಾಯಿ ಸಮಸ್ಯೆ ಕುರಿತು ಮಾತನಾಡಿದ ಹಿನ್ನಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನನೆ ಮಾಡಿದ್ದಾರೆ ಎಂದು ಆರೋಪಿಸಿ ಮೋದಿ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.


ಶನಿವಾರ ಗದಗ್ ನಲ್ಲಿ ನಡೆದ ಕಾರ್ಯಕ್ರಮದ ಭಾಷಣದಲ್ಲಿ, ಮಹದಾಯಿ ಸಮಸ್ಯೆಯನ್ನು ಮಾತುಕತೆಯ ಮೂಲಕ ಬಗೆ ಹರಿಸಲು ಬದ್ಧ ಎಂದು ಹೇಳಿದ್ದರು. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು. ಗದಗ್ ನಲ್ಲಿ ಚುನಾವಣಾ ಪ್ರಚಾರ ಸಮಾವೇಶದ ಭಾಷಣದಲ್ಲಿ ಬಿಜೆಪಿ ಗೆ ಮತ ನೀಡಿದಲ್ಲಿ ಮಹದಾಯಿ ವಿವಾದ ಬಗೆಹರಿಸುವುದಾಗಿ ಆಮಿಷ ಒಡಿದ್ದಾರೆ. ಚುನಾವಣೆಯ ನೀತಿ ಸಂಹಿತೆ ಜಾರಿಗೆ ಇರುವ ವೇಳೆಯಲ್ಲಿ ಪಕ್ಷದ ಪ್ರಣಾಳಿಕೆ ವಿಷಯ ಬಿಟ್ಟು ಬೇರೆ ಯಾವ ವಿಚಾರವೂ ಮಾಡನಾಡುವಂತಿಲ್ಲ. ಆದ್ದರಿಂದ ಪ್ರಧಾನಿಗಳ ಇಂತಹ ಹೇಳಿಕೆಗಳನ್ನ ಆಯೋಗ ಕೂಡಲೇ ತಡೆ ನೀಡಬೇಕು ಎಂದು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಹವಾಯಿ ದ್ವೀಪದ ಆಗ್ನೇಯ ಭಾಗದಲ್ಲಿ ಕಾಣಿಸಿಕೊಂಡ ಜ್ವಾಲಾಮುಖಿ