Select Your Language

Notifications

webdunia
webdunia
webdunia
webdunia

ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಗೊಂಡ ನಟಿ ಅಮೂಲ್ಯ ಮಾವ ಜಿ.ಎಚ್.ರಾಮಚಂದ್ರ

ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಗೊಂಡ ನಟಿ ಅಮೂಲ್ಯ ಮಾವ ಜಿ.ಎಚ್.ರಾಮಚಂದ್ರ
ಬೆಂಗಳೂರು , ಶನಿವಾರ, 14 ಏಪ್ರಿಲ್ 2018 (08:21 IST)
ಬೆಂಗಳೂರು : ನಟಿ ಅಮೂಲ್ಯ ಅವರ ಮಾವ ಜಿ.ಎಚ್.ರಾಮಚಂದ್ರ ಅವರು ಇದೀಗ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ.


ಎರಡು ದಶಕದಿಂದಲೂ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ರಾಮಚಂದ್ರ ಅವರು ರಾಜರಾಜೇಶ್ವರಿ ನಗರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿ ಕೂಡ ಆಗಿದ್ದರು. ಯಡಿಯೂರಪ್ಪ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಇವರು ಜೆಡಿಎಸ್ ಸೆರ್ಪಡೆಗೊಂಡಿದ್ದು, ರಾಜರಾಜೇಶ್ವರಿನಗರದಲ್ಲಿ ಬಿಜೆಪಿಗೆ ಹಿನ್ನಡೆ ಆಗುವ ಸಂಭವವಿದೆ.


ರಾಜರಾಜೇಶ್ವರಿ ನಗರದಿಂದ ಪ್ರಜ್ವಲ್‌ ರೇವಣ್ಣ ಅವರಿಗೆ ಟಿಕೆಟ್ ನಿರಾಕರಿಸಲಾಗಿರುವುದರಿಂದ , ರಾಮಚಂದ್ರ ಅವರಿಗೇ ಜೆಡಿಎಸ್ ಟಿಕೆಟ್ ಸಿಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ದೇವೇಗೌಡರಿಗೆ ಈಗ ತೆಲಂಗಾಣ ಸಿಎಂ, ಪ್ರಕಾಶ್ ರೈ ಬಲ!