Webdunia - Bharat's app for daily news and videos

Install App

ಮಾನ್ಯ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್

Webdunia
ಸೋಮವಾರ, 28 ಮೇ 2018 (07:09 IST)
ಬೆಂಗಳೂರು : ಮಾನ್ಯ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ  ನಿವಾಸಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಅವರ  ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಭಾನುವಾರ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.


ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಜ್ ಕುಮಾರ್ ಅವರು, ‘ಸಿಎಂ ಆದ ನಂತರ ಮೊದಲ ಬಾರಿಗೆ ಭೇಟಿ ಮಾಡುತ್ತಿದ್ದೇವೆ. ಸಿನಿಮಾ ಹಾಗೂ ಪ್ರೊಡಕ್ಷನ್ ಇಂಡಸ್ಟ್ರಿಯಿಂದ ಬಂದು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದಾರೆ. ನಾವು ಹಾಗೂ ದೇವೆಗೌಡರ ಕುಟುಂಬದವರು ಹೆಚ್ಚು ಆತ್ಮೀಯರು ಎಂದು ಹೇಳಿದ್ದಾರೆ.


ಹಾಗೇ ಮುಂದಿನ ಲೋಕಸಭೆಗೆ ಗೀತಾ ಶಿವರಾಜ್ ಕುಮಾರ್ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಚುನಾವಣೆಗೆ ಇನ್ನೂ ಸಮಯವಿದೆ. ಪತ್ನಿ ಗೀತಾ ಈ ಬಾರಿ ಜೆಡಿಎಸ್ ಪರ ಪ್ರಚಾರ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.


ಇನ್ನು ವಿಷ್ಣುವರ್ಧನ್ ಸಮಾಧಿ ಮೈಸೂರಿಗೆ ಸ್ಥಳಾಂತರ ಮಾಡುವ ವಿಚಾರದ ಬಗ್ಗೆ ಮಾತನಾಡಿಲ್ಲ, ಹಿರಿಯ ನಟ ಅಂಬರೀಶ್ ಅವರು ಬಂದು ಮಾತನಾಡುತ್ತಾರೆ. ನಾನು ಈಗಲೇ ಏನೂ ಹೇಳಕ್ಕೆ ಆಗೊಲ್ಲ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments