Select Your Language

Notifications

webdunia
webdunia
webdunia
webdunia

ದರ್ಶನ್‌ಗೆ ಟಾಂಗ್ ಕೊಡಲು ಜೆಡಿಎಸ್‌ನಿಂದ ರೈತ ಚೈತನ್ಯ ಯಾತ್ರೆ

ದರ್ಶನ್‌ಗೆ ಟಾಂಗ್ ಕೊಡಲು ಜೆಡಿಎಸ್‌ನಿಂದ ರೈತ ಚೈತನ್ಯ ಯಾತ್ರೆ
ಮಂಡ್ಯ , ಭಾನುವಾರ, 1 ಏಪ್ರಿಲ್ 2018 (15:06 IST)
ದಿವಂಗತ ಕೆ.ಎಸ್.ಪುಟ್ಟಣ್ಣಯ್ಯ ಪುತ್ರ ದರ್ಶನ್‌ಗೆ ಟಾಂಗ್ ಕೊಡಲು ಜೆಡಿಎಸ್ ಪಕ್ಷದಿಂದ ರೈತ ಚೈತನ್ಯ ಯಾತ್ರೆ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಮಂಡ್ಯ ಜಿಲ್ಲೆಯ ಮೇಲುಕೋಟೆ ಕ್ಷೇತ್ರದ ಪಾಂಡವಪುರ ಪಟ್ಟಣದಲ್ಲಿ ಜೆಡಿಎಸ್ ರೈತ ಚೈತನ್ಯ ಯಾತ್ರೆ ಯಶಸ್ವಿಯಾಗಿ ನಡೆದಿದ್ದು
ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ನೇತೃತ್ವದಲ್ಲಿ ಸಮಾವೇಶ ನಡೆಯುತ್ತಿದೆ.
 
ಕಾಂಗ್ರೆಸ್ ಪಕ್ಷದ ಅಭ್ಯರ್ಥಿದರ್ಶನ್ ಪುಟ್ಟಣ್ಣಯ್ಯರನ್ನು ಶತಾಯ ಗತಾಯ ಸೋಲಿಸಲೇಬೇಕು ಎನ್ನುವ ಉದ್ದೇಶ ಹೊಂದಿರುವ ಜೆಡಿಎಸ್, ಮಂಡ್ಯ ಜಿಲ್ಲೆಯಾದ್ಯಂತ ಅಬ್ಬರದ ಪ್ರಚಾರ ನಡೆಸಿದೆ. 
 
ಸಂಸದ, ಮೇಲುಕೋಟೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪುಟ್ಟರಾಜು ಪರ ಜೆಡಿಎಸ್ ನಾಯಕರ ದಂಡೆ ಪ್ರಚಾರದಲ್ಲಿ ತೊಡಗಿಸಿಕೊಂಡಿದೆ.
 
ಸಮಾವೇಶದಲ್ಲಿ ಅಭ್ಯರ್ಥಿ ಪುಟ್ಟರಾಜು, ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾಖಾನ್, ಮಾಜಿ ಸಚಿವ ಪಿಜಿಆರ್ ಸಿಂಧ್ಯಾ, ಬಿಎಸ್ಪಿ ರಾಜ್ಯಾಧ್ಯಕ್ಷ ಮಹೇಶ್, ಸಂಸದ ಕುಪೇಂದ್ರ ರೆಡ್ಡಿ, ಶಾಸಕ ಕೆ.ಟಿ.ಶ್ರೀಕಂಠೇಗೌಡ ಇತರರು ಭಾಗಿಯಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೈಸೂರು: ಸಿಎಂ ಭೇಟಿ ಮಾಡಿದ ಜಮೀರ್, ಚೆಲುವರಾಯ ಸ್ವಾಮಿ