Select Your Language

Notifications

webdunia
webdunia
webdunia
webdunia

ಯಾವುದೇ ಸಮಸ್ಯೆಯಿದ್ದರೂ ಜನ ನನ್ನ ಸಂಪರ್ಕಿಸಬಹುದು: ಕುಮಾರಸ್ವಾಮಿ

ಯಾವುದೇ ಸಮಸ್ಯೆಯಿದ್ದರೂ ಜನ ನನ್ನ ಸಂಪರ್ಕಿಸಬಹುದು: ಕುಮಾರಸ್ವಾಮಿ
ಮಂಗಳೂರು , ಮಂಗಳವಾರ, 22 ಮೇ 2018 (10:55 IST)
ಮಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೊದಲು ಪುಣ್ಯ ಕ್ಷೇತ್ರಗಳಾದ ಧರ್ಮಸ್ಥಳ, ಶೃಂಗೇರಿಗೆ ಭೇಟಿ ನೀಡಿರುವ ಎಚ್ ಡಿ ಕುಮಾರಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.

‘ಜನ ಯಾವುದೇ ಸಮಸ್ಯೆಯಿದ್ದರೂ ನನ್ನನ್ನು ನೇರವಾಗಿ ಸಂಪರ್ಕಿಸಬಹುದು. ಜನರ ಸಮಸ್ಯೆಗಳನ್ನು ಪರಿಹರಿಸುವುದಕ್ಕೆಂದೇ ನಾನಿದ್ದೇನೆ’ ಎಂದು ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಧರ್ಮಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ. ನಾಳೆ ಕುಮಾರಸ್ವಾಮಿ ಪ್ರಮಾಣ ವಚನ ನಡೆಯಲಿದ್ದು, ಅದಕ್ಕೂ ಮೊದಲು ಪರಿವಾರ ಸಮೇತರಾಗಿ ಶೃಂಗೇರಿ, ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರ ಚುನಾವಣಾ ಆಯೋಗಕ್ಕೆ ಮಾಜಿ ಸಿಎಂ ಯಡಿಯೂರಪ್ಪ ದೂರು