Select Your Language

Notifications

webdunia
webdunia
webdunia
webdunia

ಕಾಂಗ್ರೆಸ್‌ನಲ್ಲಿ ಖಾತೆ ಹಂಚಿಕೆ ವಿಚಾರದಲ್ಲಿ ಸಮಸ್ಯೆಗಳು ಉದ್ಭವಿಸಿದೆಯಾ? ಈ ಬಗ್ಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು?

ಕಾಂಗ್ರೆಸ್‌ನಲ್ಲಿ ಖಾತೆ ಹಂಚಿಕೆ ವಿಚಾರದಲ್ಲಿ ಸಮಸ್ಯೆಗಳು ಉದ್ಭವಿಸಿದೆಯಾ? ಈ ಬಗ್ಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು?
ಬೆಂಗಳೂರು , ಭಾನುವಾರ, 27 ಮೇ 2018 (07:25 IST)
ಬೆಂಗಳೂರು : ಕಾಂಗ್ರೆಸ್‌ನಲ್ಲಿ ಖಾತೆ ಹಂಚಿಕೆ ವಿಚಾರದಲ್ಲಿ ಕೆಲವು ಸಮಸ್ಯೆಗಳು ಉದ್ಭವಿಸಿದೆ. ಆದರೆ ಸರಕಾರವೇ ಬಿದ್ದುಹೋಗುವ ಮಟ್ಟದಲ್ಲಿ ಏನಿಲ್ಲ. ಎಲ್ಲ ಸಮಸ್ಯೆಗಳು ಶೀಘ್ರವೇ ಶಮನವಾಗಲಿದೆ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು,’ ಕಾಂಗ್ರೆಸ್ ನಾಯಕರು ಅವರ ಹೈಕಮಾಂಡ್ ಭೇಟಿಗಾಗಿ ಹೊಸದಿಲ್ಲಿಗೆ ತೆರಳಿದ್ದು, ಮಾತುಕತೆ ನಡೆಸುತ್ತಿದ್ದಾರೆ. ಅವರು ತೀರ್ಮಾನ ಕೈಗೊಂಡ ಬಳಿಕ ಮುಂದಿನ ಹಾದಿ ಸುಗಮವಾಗಲಿದೆ. ಸಂಪುಟವನ್ನು ವಿಸ್ತರಣೆ ಮಾಡಿ, ಖಾತೆಗಳನ್ನು ಹಂಚಿಕೆ ಮಾಡಬೇಕಾಗಿದೆ. ಇನ್ನೆರಡು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ. ರೈತರ ಸಾಲ ಮನ್ನಾ ವಿಚಾರದಲ್ಲಿ ಯಾವುದೇ ಆತುರದ ಅಥವಾ ವಿಳಂಬದ ನಿರ್ಧಾರವನ್ನು ಕೈಗೊಳ್ಳುವುದಿಲ್ಲ. ಅಧಿಕಾರಿಗಳು, ತಜ್ಞರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಚುನಾವಣೆ ಸಂದರ್ಭದಲ್ಲಿ ಮತ್ತೆ ಸಂಕಷ್ಟಕ್ಕೆ ಸಿಲುಕಿದ ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ