Select Your Language

Notifications

webdunia
webdunia
webdunia
webdunia

ಡಾ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ರಾಹುಲ್ ಗಾಂಧಿ

ಡಾ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ರಾಹುಲ್ ಗಾಂಧಿ
ಮಂಗಳೂರು , ಸೋಮವಾರ, 23 ಏಪ್ರಿಲ್ 2018 (13:11 IST)
ಮುಂಬರುವ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್  ಪ್ರಚಾರ ಬಿರುಸುಗೊಳಿಸಲು ಮುಂದಾಗಿದೆ. ಏಪ್ರಿಲ್‌ 27 ರಂದು ಕಾಂಗ್ರೆಸ್  ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ  ದಕ್ಷಿಣ ಕನ್ನಡ ಪ್ರವಾಸ ಕೈಗೊಳ್ಳಲಿದ್ದಾರೆ.
 ಬಂಟ್ವಾಳ್ ದಲ್ಲಿ ಬೃಹತ್ ಕಾಂಗ್ರೆಸ್ ಸಮಾವೇಶ ನಡೆಯಲಿದೆ. ಬಳಿಕ ರಾಹುಲ್ ಗಾಂಧಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿ ದೇವರ ದರ್ಶನ ಮಾಡಲಿದ್ದಾರೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಲಿದ್ದಾರೆ. 
 
ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಅವರು ಬಂಟ್ವಾಳ್ ದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸುವ ಹಿನ್ನಲೆಯಲ್ಲಿ ರ್ಯಾಲಿ ಯಶಸ್ವಿ ಗೊಳಿಸಲು ಸಚಿವ ರಮಾನಾಥ್ ರೈ ಅವರ ನೇತೃತ್ವದಲ್ಲಿ ಬಿ ಸಿ ರೋಡ್ ನಲ್ಲಿ ಸಭೆ ನಡೆಯಿತು.
 
ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸುವುದು. ಬಿ.ಸಿ ರೋಡ್ ಹಾಗೂ ಬಂಟ್ವಾಳ್ ದಲ್ಲಿ ರಾಹುಲ್ ಗಾಂಧಿ ರೋಡ್ ಶೋ ನಡೆಸಲು ನಿರ್ಧರಿಸಲಾಯಿತು.

ಪೇಜ್ ಪ್ರಮುಖರು ಕಡ್ಡಾಯವಾಗಿ ಭಾಗವಹಿಸುವಂತೆ  ಸಭೆಯಲ್ಲಿ ನಿರ್ಧರಿಸಲಾಯಿತು. ಸುಮಾರು 25 ಸಾವಿರಕ್ಕೂ  ಹೆಚ್ಚು ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವ ರಮಾನಾಥ್ ರೈ ತಿಳಿಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಅಮಿತ್ ಶಾ ಏನ್ ಹೇಳ್ತಾರೋ ಅದೇ ಫೈನಲ್: ರಾಮುಲು