Webdunia - Bharat's app for daily news and videos

Install App

ವಿಪತ್ತು ನಿರ್ವಹಣೆ ತರಬೇತಿ ನೀಡಲು ವಿದ್ಯಾರ್ಥಿಯನ್ನು ಕಟ್ಟಡದಿಂದ ತಳ್ಳಿದ ತರಬೇತುದಾರ. ಆಮೇಲೆ ಆಗಿದ್ದೇನು?

Webdunia
ಶುಕ್ರವಾರ, 13 ಜುಲೈ 2018 (11:46 IST)
ಕೊಯಮತ್ತೂರು : ವಿಪತ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಜಾಗೃತಿ ಕ್ರಮಗಳನ್ನು  ತಿಳಿಸಲು ಹೋಗಿ ತರಬೇತುದಾರ ವಿದ್ಯಾರ್ಥಿಯೊಬ್ಬಳನ್ನು ಕಟ್ಟಡದ ಎರಡನೇ ಮಹಡಿಯಿಂದ ಬಲವಂತವಾಗಿ ತಳ್ಳಿದ ಕಾರಣ ಆಕೆ ಸಾವಿಗೀಡಾದ ಘಟನೆ ತಮಿಳುನಾಡಿದ ಕೊಯಮತ್ತೂರಿನಲ್ಲಿ ಸಂಭವಿಸಿದೆ.


ಲೋಕೇಶ್ವರಿ ದಾರಣವಾಗಿ ಸಾವನ್ನಪ್ಪಿದ ವಿದ್ಯಾರ್ಥಿನಿ. ಕೊವಯ್ ಕಲೈಮಗಳ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ವಿಪತ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಜಾಗೃತಿ ಕ್ರಮಗಳ ಬಗ್ಗೆ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಇತ್ತು. ಈ ವೇಳೆ ಲೋಕೇಶ್ವರಿ ಮತ್ತು ತರಬೇತುದಾರ ಎರಡನೇ ಮಹಡಿಯಲ್ಲಿ ಡೆಮೊಗಾಗಿ ನಿಂತಿದ್ದರು. ಸುರಕ್ಷತೆಗಾಗಿ ಒಂದು ಹಗ್ಗ ಕಟ್ಟಲಾಗಿತ್ತು. ಕೆಳಗೆ ವಿದ್ಯಾರ್ಥಿಗಳು ಬಲೆಯನ್ನು ಹಿಡಿದುಕೊಂಡಿದ್ದು, ಆಕೆ ಕೆಳಗೆ ಬೀಳುವಾಗ ಆಕೆಯನ್ನು ಬಲೆಯಲ್ಲಿ ರಕ್ಷಿಸುವುದು ಇದರ ಉದ್ದೇಶವಾಗಿತ್ತು.


ಆದರೆ ನಡೆದಿದ್ದೇ ಬೇರೆ. ಆಕೆಯನ್ನು ತರಬೇತುದಾರ ಕೆಳಕ್ಕೆ ತಳ್ಳಿದಾಗ ಆಕೆ ಬೀಳುವ ರಭಸಕ್ಕೆ ಮೊದಲ ಮಹಡಿಯಲ್ಲಿದ್ದ ಸಜ್ಞಾಗೆ ಆಕೆಯ ತಲೆ ಬಡಿದು ದುರಂತ ಸಾವಿಗೀಡಾಗಿದ್ದಾಳೆ. ಇದನ್ನುವಿದ್ಯಾರ್ಥಿಗಳು ವಿಡಿಯೋ ಮಾಡಿದ್ದು, ಇಡೀ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments