Select Your Language

Notifications

webdunia
webdunia
webdunia
webdunia

ಯಾರೆಲ್ಲಾ ಬರಲಿದ್ದಾರೆ 'ಕುಮಾರ' ಪಟ್ಟಾಭಿಷೇಕಕ್ಕೆ?

ಯಾರೆಲ್ಲಾ ಬರಲಿದ್ದಾರೆ 'ಕುಮಾರ' ಪಟ್ಟಾಭಿಷೇಕಕ್ಕೆ?
ಬೆಂಗಳೂರು , ಮಂಗಳವಾರ, 22 ಮೇ 2018 (09:14 IST)
ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ನಾಳೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ದೇಶದ ವಿವಿಧ ನಾಯಕರು ಆಗಮಿಸಲಿದ್ದಾರೆ.

ನಿನ್ನೆ ದೆಹಲಿಗೆ ತೆರಳಿದ್ದ ಕುಮಾರಸ್ವಾಮಿ ಆರ್ ಜೆಡಿ, ಸಮಾಜವಾದಿ ಪಕ್ಷ, ಆಮ್ ಆದ್ಮಿ ನಾಯಕ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವರಿಗೆ ಪ್ರಮಾಣ ವಚನ ಸಮಾರಂಭಕ್ಕೆ ಆಹ್ವಾನ ನೀಡಿದ್ದರು.  

ಈ ನಾಯಕರೆಲ್ಲಾ ನಾಳೆ ನಡೆಯಲಿರುವ ಸಮಾರಂಭಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ. ಜತೆಗೆ ನೂತನ ಪಕ್ಷ ಸ್ಥಾಪಿಸಿರುವ ತಮಿಳು ಸೂಪರ್ ಸ್ಟಾರ್ ಕಮಲ್ ಹಾಸನ್ ಗೂ ಕುಮಾರಸ್ವಾಮಿ ವಿಶೇಷ ಆಹ್ವಾನವಿತ್ತಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಅವರೂ ಆಗಮಿಸುವ ನಿರೀಕ್ಷೆಯಿದೆ. ಅಂತೂ ಈ ಪದಗ್ರಹಣ ಸಮಾರಂಭ ಬಿಜೆಪಿ ವಿರೋಧಿ ಪಕ್ಷಗಳು ಒಂದಾಗುವ ಮತ್ತು ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ವಿರುದ್ಧ ಹೋರಾಡುವ ಸೂಚನೆಯಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ನನಗೆ ನ್ಯಾಯ ದೊರೆಯದಿದ್ದರೆ ಮಾನನಷ್ಟ ಮೊಕದ್ದಮೆ ದೂರು ದಾಖಲಿಸಲಾಗುವುದು- ನಟ ಚೇತನ್ ಆಕ್ರೋಶ