Select Your Language

Notifications

webdunia
webdunia
webdunia
webdunia

ಕುಮಾರಸ್ವಾಮಿ ವಿರುದ್ಧ ಜಮೀರ್ ಏಕವಚನದಲ್ಲಿ ವಾಗ್ದಾಳಿ

ಕುಮಾರಸ್ವಾಮಿ ವಿರುದ್ಧ ಜಮೀರ್ ಏಕವಚನದಲ್ಲಿ ವಾಗ್ದಾಳಿ
ರಾಮನಗರ , ಸೋಮವಾರ, 30 ಏಪ್ರಿಲ್ 2018 (18:02 IST)
ಮಾಗಡಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಲಕೃಷ್ಣ ಪರ ಜಮೀರ್ ಅಹಮ್ಮದ್ ಬಿಡದಿ ವ್ಯಾಪ್ತಿಯಲ್ಲಿ ಮತಯಾಚನೆ ಮಾಡಿದರು. ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಜಮೀರ್ ಅಹಮದ್ ಖಾನ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ರು. 
ನನ್ನ ಬಗ್ಗೆ ಮಾತನಾಡ್ಲಿಕ್ಕೆ ಅವ್ನು ಯಾರು? ನಾನು ರಾಮನಗರ ಚನ್ನಪಟ್ಟಣಕ್ಕೆ ಬಂದು ಹೋದ ಮೇಲೆ ಹಣ ಹಂಚಿ ಜನ ಸೇರಿಸಿರೋದು ಯಾರು? 22 ಲಕ್ಷ ಹಣ ಹಂಚಿ ಕುಮಾರಸ್ವಾಮಿ‌ ನಿನ್ನೆ ಚನ್ನಪಟ್ಟಣದಲ್ಲಿ ಪ್ರಚಾರ ಮಾಡಿದ್ದಾನೆ. ನಾನು ಬಂದಾಗ ತಡರಾತ್ರಿವರೆಗೂ ಮಹಿಳೆಯರು ಸೇರಿದಂತೆ ಸಾವಿರಾರು ಮಂದಿ ಚನ್ನಪಟ್ಟಣದಲ್ಲಿ ಜಮಾಯಿಸಿದ್ರು.
 
ಕುಮಾರಸ್ವಾಮಿ ಹಣ‌ಕೊಟ್ರು ಸೇರಿದ್ದು 2೦೦ ಜನ ಮಾತ್ರ. ಕುಮಾರಸ್ವಾಮಿ‌ ಹಣಕೊಟ್ಟು ಜನ ಸೇರಿಸ್ತಾನೆ. ಆತನ ಅಭಿಮಾನಕ್ಕೆ ಜನ ಸೇರೋದಿಲ್ಲ. ನಾನು ನನ್ನ ಕ್ಷೇತ್ರದಲ್ಲಿ ಪ್ರಚಾರ ಮಾಡಿಲ್ಲ, ರಾಜ್ಯದ 52ಕ್ಷೇತ್ರದಲ್ಲಿ ಈವರೆಗೆ ಪ್ರಚಾರ ಮಾಡಿದ್ದೇನೆ. ಮೈಸೂರು ಭಾಗದಲ್ಲಿ ನನ್ನ ಸಮುದಾಯದ ಜನ ನನ್ನ ನಂಬಿ ಕಾಂಗ್ರೆಸ್ ಸೇರೋದನ್ನ ನೋಡಿ. ನನ್ನ ಸಮುದಾಯದ ಜನರನ್ನ ತುರುಕರು ಕಾಸುಕೊಟ್ರೆ ಬರ್ತಾರೆ ಅಂತ ಜರಿದಿದ್ದಾರೆ. 
 
ನನ್ನ ಜನ ಕಾಸಿಗೆ ಬದುಕಿಲ್ಲ. ಕೊಂಡುಕೊಳ್ಳಲು ಅವ್ನು ಯಾರು. ಈಗ ಮುಸ್ಲಿಂರನ್ನ ಜರಿದು ಈಗ ನಾನು ಮಾತನಾಡಿಲ್ಲ ಅಂತಾರೆ. ಅವ್ರದು ಹಿಟ್ ಅಂಡ್ ರನ್ ಕೇಸ್ ಇದ್ದಂತೆ. ಯಾವುದನ್ನ ಅವ್ರು ಹೇಳಿ ಒಪ್ಪಿಕೊಂಡಿದ್ದಾನೆ. ಹೇಳೋದನ್ನ ಹೇಳಿ ನಂತ್ರ ನಾನು ಹೇಳೇ ಇಲ್ಲ ಅಂತಾರೆ. ಅಮಿತ್ ಭೇಟಿ ವಿಚಾರ ಕೇಳಿದ್ರೆ ಯಾಕೆ ಕುಮಾರಸ್ವಾಮಿ ಬ್ಯಾ ಬ್ಯಾ ಅಂತಿಲ್ವಾ?  ಹೇಳಿದ್ದನ್ನ ಅವ್ರು ಅವ್ರ ಜಮಾನ್ದಲ್ಲಿ ಸಮರ್ಥನೆ ಮಾಡಿಕೊಂಡಿಲ್ಲ ಎಂದು ಜಮೀರ್ ಹೆಚ್ಡಿಕೆ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ನೆಚ್ಚಿನ ನಾಯಕನ ಗೆಲುವಿಗಾಗಿ ಅಭಿಮಾನಿಯಿಂದ ವಿಶಿಷ್ಟ ಹರಕೆ