Webdunia - Bharat's app for daily news and videos

Install App

ಕುರುಕ್ಷೇತ್ರ ಚಿತ್ರದ ವಿವಾದದ ಬಗ್ಗೆ ಚಿತ್ರದ ನಿರ್ಮಾಪಕ ಮುನಿರತ್ನ ಹೇಳಿದ್ದೇನು?

Webdunia
ಸೋಮವಾರ, 16 ಜುಲೈ 2018 (09:08 IST)
ಬೆಂಗಳೂರು : ಚಾಲೆಂಜಿಂಗ್​ ಸ್ಟಾರ್​ ದರ್ಶನ್​​ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಕುರುಕ್ಷೇತ್ರ’ದ ಫಸ್ಟ್​ ಲುಕ್​ ಟೀಸರ್ ​​ನಿಂದ ಕಿರಿಕ್ ವೊಂದು ಶುರುವಾಗಿದ್ದು, ಇದೀಗ ಈ ವಿವಾದದ ಬಗ್ಗೆ ಚಿತ್ರದ ನಿರ್ಮಾಪಕ ಹಾಗೂ ಶಾಸಕ ಮುನಿರತ್ನ ಪ್ರತಿಕ್ರಿಯೆ ನೀಡಿದ್ದಾರೆ.


ಕುರುಕ್ಷೇತ್ರ ಫಸ್ಟ್ ಲುಕ್​​​ ಟೀಸರ್​ ರಿಲೀಸ್​ ಆಗಿ, ಒಳ್ಳೆ ರೆಸ್ಪಾನ್ಸ್​ ಕೂಡ ಸಿಕ್ಕಿತ್ತು. ಆದ್ರೆ ಕುರುಕ್ಷೇತ್ರದಲ್ಲಿ ನಿಖಿಲ್​ ಕುಮಾರಸ್ವಾಮಿ ಟೀಸರ್​ ದರ್ಶನ್​​​ ಟೀಸರ್ ಗಿಂತ ಹೆಚ್ಚು ಪಾಪ್ಯುಲರ್​ ಆಗಿತ್ತು. ಕುರುಕ್ಷೇತ್ರ ಸಿನಿಮಾದಲ್ಲಿ ಅಷ್ಟು ಪ್ರಾಮುಖ್ಯತೆ​​​ ಇಲ್ಲದ ಅಭಿಮಾನ್ಯು ಪಾತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ನಟಿಸುತ್ತಿದ್ದಾರೆ ಎಂಬ ಕಾರಣಕ್ಕೆ  ನಿಖಿಲ್​​ ಪಾತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ.

ಕುಮಾರ ಸ್ವಾಮಿ ಅವರನ್ನ ಓಲೈಸೋ ಸಲುವಾಗಿ ನಿಖಿಲ್​ ಪಾತ್ರವನ್ನ ಹೆಚ್ಚಾಗಿ ಬಿಂಬಿಸಲಾಗಿದೆ. ಈ ಕಾರಣದಿಂದ ನಟ ದರ್ಶನ್ ಚಿತ್ರದ ಮೇಲೆ ಮುನಿಸಿಕೊಂಡಿದ್ದಾರೆ ಎಂಬ ಮಾತು ಕೇಳಿ ಬಂದಿದೆ.


ಆದರೆ, ಈ ವಿವಾದದ ಸುದ್ದಿ ಬಗ್ಗೆ ಇದೀಗ ಚಿತ್ರದ ನಿರ್ಮಾಪಕ ಹಾಗೂ ಶಾಸಕ ಮುನಿರತ್ನ ಪ್ರತಿಕ್ರಿಯೆ ನೀಡಿದ್ದು, ''ಕುರುಕ್ಷೇತ್ರ' ಸಿನಿಮಾ ಕಾಲ್ಪನಿಕ ಕಥೆ ಅಲ್ಲ, ಇದು ಮಹಾಭಾರತದ ಕಥೆ. ಹೀಗಿದ್ದ ಮೇಲೆ ಇಲ್ಲಿ ಯಾರ ಪಾತ್ರವನ್ನು ಹೆಚ್ಚಿಸಲು, ಯಾರ ಪಾತ್ರವನ್ನು ಕಡಿಮೆ ಮಾಡಲು ಸಾಧ್ಯವಿಲ್ಲ. ವಿವಾದ ಆಗಿರುವ ಸುದ್ದಿ ಸುಳ್ಳು. ದರ್ಶನ್ ಚಿತ್ರದ ಬಗ್ಗೆ ಮುನಿಸಿಕೊಂಡಿಲ್ಲ. ಇದು ಅವರ 50ನೇ ಸಿನಿಮಾ’ ಎಂದು ಸ್ಪಷ್ಟನೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments