Webdunia - Bharat's app for daily news and videos

Install App

ಬಿಸಿಲಿನ ಬೇಗೆಯಿಂದ ಬಸವಳಿದ ಜನರಿಗೆ ತಂಪೆರೆದ ಮಳೆರಾಯ

Webdunia
ಬುಧವಾರ, 9 ಏಪ್ರಿಲ್ 2014 (20:11 IST)
PR
PR
ಬೆಂಗಳೂರು: ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಬೆಂಗಳೂರಿನಲ್ಲಿ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗಿದ್ದು, ಮಳೆಯಿಂದ ಜನತೆ ಖುಷಿಯಾಗಿದ್ದಾರೆ. ಸಂಜೆಯ ಹೊತ್ತಿಗೆ ಬೆಂಗಳೂರಿನ ಅನೇಕ ಕಡೆ ಗುಡುಗಿನಿಂದ ಕೂಡಿದ ಬಿರುಸಾದ ಮಳೆ ತಾತ್ಕಾಲಿಕ ಶಮನ ನೀಡಿದೆ. ಕಚೇರಿಯಿಂದ ಮನೆಗೆ ಹೋಗುವ ಜನರಿಗೆ ಅಡಚಣೆಯಾದ್ರೂ ಕೂಡ ಜನರು ಬೇಸರಗೊಳ್ಳದೇ ಅಪರೂಪದ ಮಳೆರಾಯನಿಗೆ ಸ್ವಾಗತ ನೀಡಿದ್ದಾರೆ. ಕೆಲವು ಭಾಗದಲ್ಲಿ ಒಂದು ಗಂಟೆ ಕಾಲ ಮಳೆ ಸುರಿದಿದೆ. ಸುಮಾರು ಎರಡು ವಾರಗಳಿಂದ ಬಿಸಿಲಿನ ಬೇಗೆಯಿಂದ ಜನರು ತತ್ತರಿಸಿದ್ದರು.

ಈ ಮಳೆಯಿಂದ ತಾಪಮಾನ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದು, ಮಲ್ಲೇಶ್ವರಂ, ರಾಜಾಜಿನಗರದಲ್ಲಿ ಹೆಚ್ಚಿನ ಮಳೆ ಬಿದ್ದಿದ್ದು, ಕೆಲವು ಕಡೆ ತುಂತುರು ಮಳೆಯಾಗಿದೆ. ಕಳೆದ ಮೂರು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ನಾಳೆ ಮತ್ತು ನಾಡಿದ್ದು ತುಂತುರು ಮಳೆ ಬೀಳುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments