Webdunia - Bharat's app for daily news and videos

Install App

ಭಾರತ್ ಬಂಧ್ ಗೆ ಕರೆ ಕೊಟ್ಟ ಕಾಂಗ್ರೆಸ್ ಒಳ ಮಸಲತ್ತು ಇದುವೇ ಎಂದ ಬಿಜೆಪಿ

Webdunia
ಮಂಗಳವಾರ, 11 ಸೆಪ್ಟಂಬರ್ 2018 (09:54 IST)
ನವದೆಹಲಿ: ನಿನ್ನೆ ತೈಲ ಬೆಲೆ ಏರಿಕೆ ವಿರೋಧಿಸಿ ದೇಶದಾದ್ಯಂತ ಭಾರತ್ ಬಂಧ್ ಗೆ ಕರೆ ನೀಡಿದ್ದ ಕಾಂಗ್ರೆಸ್ ನ ಒಳ ಲೆಕ್ಕಾಚಾರ ಬೇರೆಯದೇ ಆಗಿತ್ತು ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಬಹಿರಂಗಪಡಿಸಿದ್ದಾರೆ.

ನಿನ್ನೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅರ್ಜಿ ವಿಚಾರಣೆಯ ತೀರ್ಪು ಬರುವುದಿತ್ತು. ಅದರಲ್ಲಿ ಕಾಂಗ್ರೆಸ್ ನ ಇಬ್ಬರೂ ನಾಯಕರಿಗೆ ಹಿನ್ನಡೆಯಾಗಿತ್ತು. ಈ ವಿಚಾರವನ್ನು ಮೊದಲೇ ಅರಿತಿದ್ದ ಕಾಂಗ್ರೆಸ್ ತಮ್ಮ ಪಕ್ಷದ ನಾಯಕರ ಹುಳುಕು ಗೊತ್ತಾಗಬಾರದೆಂದು ಬಂಧ್ ಗೆ ಕರೆ ನೀಡಿದರು ಎಂದು ಬಿಜೆಪಿ ವಕ್ತಾರರು ಆರೋಪಿಸಿದ್ದಾರೆ.

ದೆಹಲಿ ಹೈಕೋರ್ಟ್ ನಲ್ಲಿ ರಾಹುಲ್ ಮತ್ತು ಸೋನಿಯಾ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಆದಾಯವನ್ನು ಆ ವರ್ಷದ ಐಟಿ ರಿಟರ್ನ್ಸ್ ನಲ್ಲಿ ಉಲ್ಲೇಖಿಸದೇ ಇರುವ ವಿಚಾರವನ್ನು ಮತ್ತೆ ತನಿಖೆ ಮಾಡಬಾರದು ಎಂದು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನಿನ್ನೆ ಹೈಕೋರ್ಟ್ ತಳ್ಳಿ ಹಾಕಿದೆ. ಇದು ಕಾಂಗ್ರೆಸ್ ನಾಯಕರಿಗೆ ಹಿನ್ನಡೆಯಾಗಿದೆ. ಈ ವಿಚಾರ ದೊಡ್ಡ ಸುದ್ದಿಯಾಗಬಾರದು ಎಂಬ ಕಾರಣಕ್ಕೆ ಬಂದ್ ನಾಟಕ ಮಾಡಿದರು ಎಂದು ಸಂಬಿತ್ ಪಾತ್ರಾ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments